ಸಿಸಿಬಿ ಪೊಲೀಸರ ಕಾರ್ಯಾಚರಣೆ..4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶ…

ಮೈಸೂರು,ಜ9,Tv10 ಕನ್ನಡ

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 4.17 ಲಕ್ಷ ಮೌಲ್ಯದ 241 ಮೂಟೆ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಯನ್ನೂ ಸಹ ವಶಕ್ಕೆ ಪಡೆಯಲಾಗಿದೆ.ಖಚಿತ ಮಾಹಿತಿ ಆಧರಿಸಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ ಹೆಬ್ಬಾಳ್ ನಲ್ಲಿರುವ ಕೆ.ಎಫ್.ಸಿ.ಐ.ಗೋದಾಮಿನಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಪಡಿತರ ಅಕ್ಕಿ ಸಿದ್ದಲಿಂಗಪುರ ಗ್ರಾಮದ ಬಳಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದೆ.KA 09 D 9686 ನೊಂದಣಿ ಸಂಖ್ಯೆಯ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ.ಸಾಗಣೆ ಮಾಡುತ್ತಿದ್ದ ಲಾರಿ ಚಾಲಕನನ್ನೂ ಸಹ ವಶಕ್ಕೆ ಪಡೆದಿದ್ದಾರೆ.ಸಧ್ಯ ವಶಪಡಿಸಿಕೊಳ್ಳಲಾದ ಅಕ್ಕಿ,ಲಾರಿ ಹಾಗೂ ಚಾಲಕನನ್ನ ಮೇಟಗಳ್ಳಿ ಪೊಲೀಸರ ವಶಕ್ಕೆ ನೀಡಲಾಗಿದೆ.ಸ್ಥಳಕ್ಕೆ ಆಹಾರ ನಿರೀಕ್ಷಕರಾದ ಕಿರಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೇಟಗಳ್ಳಿ ಠಾಣೆ ಇನ್ಸ್ಪೆಕ್ಟರ್ ದಿವಾಕರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಬರೀಶ್ ರವರು ಆರೋಪಿಯನ್ನ ವಿಚಾರಣೆಗೆ ಒಳಪಡಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿರವರಾದ ಮುತ್ತುರಾಜ್,ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ, ಪಿಎಸ್ಸೈ ಲೇಪಾಕ್ಷ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.. .

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *