ಕೆ.ಆರ್.ನಗರ:ಜೋಡಿ ಕೊಲೆ ಪ್ರಕರಣ…21 ದಿನಗಳಾದರೂ ದೊರೆಯದ ಹಂತಕರ ಸುಳಿವು…ಮೃತರ ಮಾಹಿತಿಯೂ ಇಲ್ಲ…

  • Crime
  • January 10, 2024
  • No Comment
  • 355

ಕೆ.ಆರ್.ನಗರ,ಜ10,Tv10 ಕನ್ನಡ

ಕೆ.ಆರ್.ನಗರ ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ದೊರೆತ ಇಬ್ಬರು ಯುವಕರ ಮೃತದೇಹ ಪ್ರಕರಣ ಕುರಿತಂತೆ ಪೊಲೀಸರಿಗೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ.ಜೋಡಿ ಕೊಲೆ ಪ್ರಕರಣ ನಡೆದು 21 ದಿನಗಳಾದರೂ ಮೃತರು ಯಾರೆಂಬ ಮಾಹಿತಿಯೇ ದೊರೆತಿಲ್ಲ.ತಲೆನೋವಾಗಿರುವ ಪ್ರಕರಣದ ನಿಗೂಢ ರಹಸ್ಯ ಭೇಧಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಯುವಕರ ಶವದ ಬಗ್ಗೆ ಮಾಹಿತಿ ಕಲೆ ಹಾಕಲು ಪೊಲೀಸರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮಿಸ್ಸಿಂಗ್ ಕಂಪ್ಲೇಂಟ್ ಗಳು ಮೃತರ ಚಹರೆಗೆ ಹೋಲಿಕೆಯಾಗದಿರುವುದು ಪ್ರಕರಣದ ನಿಗೂಢತೆಯನ್ನ ಬಯಲಿಗೆಳೆಯಲು ಹಿನ್ನಡೆಯಾಗಿದೆ.ಸಧ್ಯದ ಪೊಲೀಸರ ತನಿಖೆಯಲ್ಲಿ ಮೃತರು ಹೊರರಾಜ್ಯದವರು ಇರಬಹುದೆಂದು ಶಂಕಿಸಿದ್ದಾರೆ.ಮೃತರ ಮಾಹಿತಿಯೇ ದೊರೆಯದ ಕಾರಣ ಹಂತಕರ ಪತ್ತೆ ಮತ್ತಷ್ಟು ಕಗ್ಗಂಟಾಗಿದೆ.ಯುವಕರ ಮಾಹಿತಿ ಪತ್ತೆಗೆ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.ಹೀಗಿದ್ದೂ ಯುವಕರ ಮಾಹಿತಿ ಪತ್ತೆ ವಿಳಂಬವಾಗಿದೆ.ಮೃತದೇಹವೊಂದರ ಕೈ ಮೇಲೆ VR POSTER 4B LEGEND ಎಂದು ಉಲ್ಲೇಖವಿರುವ ಹಚ್ಚೆ ಕಂಡು ಬಂದಿದೆ.ಮೃತರ ಬಗ್ಗೆ ಮಾಹಿತಿ ತಿಳಿದಲ್ಲಿ ಕೆ.ಆರ್.ನಗರ ಠಾಣೆ ಪೊಲೀಸರಿಗಾಗಲಿ ಅಥವಾ ಜಿಲ್ಲಾ ಪೊಲೀಸರಿಗೆ ತಿಳಿಸಬಹುದಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *