ಕೆ.ಆರ್.ನಗರ:ಜೋಡಿ ಕೊಲೆ ಪ್ರಕರಣ…21 ದಿನಗಳಾದರೂ ದೊರೆಯದ ಹಂತಕರ ಸುಳಿವು…ಮೃತರ ಮಾಹಿತಿಯೂ ಇಲ್ಲ…

  • Crime
  • January 10, 2024
  • No Comment
  • 351

ಕೆ.ಆರ್.ನಗರ,ಜ10,Tv10 ಕನ್ನಡ

ಕೆ.ಆರ್.ನಗರ ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ದೊರೆತ ಇಬ್ಬರು ಯುವಕರ ಮೃತದೇಹ ಪ್ರಕರಣ ಕುರಿತಂತೆ ಪೊಲೀಸರಿಗೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ.ಜೋಡಿ ಕೊಲೆ ಪ್ರಕರಣ ನಡೆದು 21 ದಿನಗಳಾದರೂ ಮೃತರು ಯಾರೆಂಬ ಮಾಹಿತಿಯೇ ದೊರೆತಿಲ್ಲ.ತಲೆನೋವಾಗಿರುವ ಪ್ರಕರಣದ ನಿಗೂಢ ರಹಸ್ಯ ಭೇಧಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಯುವಕರ ಶವದ ಬಗ್ಗೆ ಮಾಹಿತಿ ಕಲೆ ಹಾಕಲು ಪೊಲೀಸರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮಿಸ್ಸಿಂಗ್ ಕಂಪ್ಲೇಂಟ್ ಗಳು ಮೃತರ ಚಹರೆಗೆ ಹೋಲಿಕೆಯಾಗದಿರುವುದು ಪ್ರಕರಣದ ನಿಗೂಢತೆಯನ್ನ ಬಯಲಿಗೆಳೆಯಲು ಹಿನ್ನಡೆಯಾಗಿದೆ.ಸಧ್ಯದ ಪೊಲೀಸರ ತನಿಖೆಯಲ್ಲಿ ಮೃತರು ಹೊರರಾಜ್ಯದವರು ಇರಬಹುದೆಂದು ಶಂಕಿಸಿದ್ದಾರೆ.ಮೃತರ ಮಾಹಿತಿಯೇ ದೊರೆಯದ ಕಾರಣ ಹಂತಕರ ಪತ್ತೆ ಮತ್ತಷ್ಟು ಕಗ್ಗಂಟಾಗಿದೆ.ಯುವಕರ ಮಾಹಿತಿ ಪತ್ತೆಗೆ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.ಹೀಗಿದ್ದೂ ಯುವಕರ ಮಾಹಿತಿ ಪತ್ತೆ ವಿಳಂಬವಾಗಿದೆ.ಮೃತದೇಹವೊಂದರ ಕೈ ಮೇಲೆ VR POSTER 4B LEGEND ಎಂದು ಉಲ್ಲೇಖವಿರುವ ಹಚ್ಚೆ ಕಂಡು ಬಂದಿದೆ.ಮೃತರ ಬಗ್ಗೆ ಮಾಹಿತಿ ತಿಳಿದಲ್ಲಿ ಕೆ.ಆರ್.ನಗರ ಠಾಣೆ ಪೊಲೀಸರಿಗಾಗಲಿ ಅಥವಾ ಜಿಲ್ಲಾ ಪೊಲೀಸರಿಗೆ ತಿಳಿಸಬಹುದಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *