ಕೆ.ಆರ್.ನಗರ:ಜೋಡಿ ಕೊಲೆ ಪ್ರಕರಣ…21 ದಿನಗಳಾದರೂ ದೊರೆಯದ ಹಂತಕರ ಸುಳಿವು…ಮೃತರ ಮಾಹಿತಿಯೂ ಇಲ್ಲ…

  • Crime
  • January 10, 2024
  • No Comment
  • 289

ಕೆ.ಆರ್.ನಗರ,ಜ10,Tv10 ಕನ್ನಡ

ಕೆ.ಆರ್.ನಗರ ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ದೊರೆತ ಇಬ್ಬರು ಯುವಕರ ಮೃತದೇಹ ಪ್ರಕರಣ ಕುರಿತಂತೆ ಪೊಲೀಸರಿಗೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ.ಜೋಡಿ ಕೊಲೆ ಪ್ರಕರಣ ನಡೆದು 21 ದಿನಗಳಾದರೂ ಮೃತರು ಯಾರೆಂಬ ಮಾಹಿತಿಯೇ ದೊರೆತಿಲ್ಲ.ತಲೆನೋವಾಗಿರುವ ಪ್ರಕರಣದ ನಿಗೂಢ ರಹಸ್ಯ ಭೇಧಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಯುವಕರ ಶವದ ಬಗ್ಗೆ ಮಾಹಿತಿ ಕಲೆ ಹಾಕಲು ಪೊಲೀಸರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮಿಸ್ಸಿಂಗ್ ಕಂಪ್ಲೇಂಟ್ ಗಳು ಮೃತರ ಚಹರೆಗೆ ಹೋಲಿಕೆಯಾಗದಿರುವುದು ಪ್ರಕರಣದ ನಿಗೂಢತೆಯನ್ನ ಬಯಲಿಗೆಳೆಯಲು ಹಿನ್ನಡೆಯಾಗಿದೆ.ಸಧ್ಯದ ಪೊಲೀಸರ ತನಿಖೆಯಲ್ಲಿ ಮೃತರು ಹೊರರಾಜ್ಯದವರು ಇರಬಹುದೆಂದು ಶಂಕಿಸಿದ್ದಾರೆ.ಮೃತರ ಮಾಹಿತಿಯೇ ದೊರೆಯದ ಕಾರಣ ಹಂತಕರ ಪತ್ತೆ ಮತ್ತಷ್ಟು ಕಗ್ಗಂಟಾಗಿದೆ.ಯುವಕರ ಮಾಹಿತಿ ಪತ್ತೆಗೆ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.ಹೀಗಿದ್ದೂ ಯುವಕರ ಮಾಹಿತಿ ಪತ್ತೆ ವಿಳಂಬವಾಗಿದೆ.ಮೃತದೇಹವೊಂದರ ಕೈ ಮೇಲೆ VR POSTER 4B LEGEND ಎಂದು ಉಲ್ಲೇಖವಿರುವ ಹಚ್ಚೆ ಕಂಡು ಬಂದಿದೆ.ಮೃತರ ಬಗ್ಗೆ ಮಾಹಿತಿ ತಿಳಿದಲ್ಲಿ ಕೆ.ಆರ್.ನಗರ ಠಾಣೆ ಪೊಲೀಸರಿಗಾಗಲಿ ಅಥವಾ ಜಿಲ್ಲಾ ಪೊಲೀಸರಿಗೆ ತಿಳಿಸಬಹುದಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *