ಕೆ.ಆರ್.ನಗರ:ಜೋಡಿ ಕೊಲೆ ಪ್ರಕರಣ…21 ದಿನಗಳಾದರೂ ದೊರೆಯದ ಹಂತಕರ ಸುಳಿವು…ಮೃತರ ಮಾಹಿತಿಯೂ ಇಲ್ಲ…

  • Crime
  • January 10, 2024
  • No Comment
  • 348

ಕೆ.ಆರ್.ನಗರ,ಜ10,Tv10 ಕನ್ನಡ

ಕೆ.ಆರ್.ನಗರ ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ದೊರೆತ ಇಬ್ಬರು ಯುವಕರ ಮೃತದೇಹ ಪ್ರಕರಣ ಕುರಿತಂತೆ ಪೊಲೀಸರಿಗೆ ಇದುವರೆಗೆ ಯಾವುದೇ ಸುಳಿವು ಸಿಕ್ಕಿಲ್ಲ.ಜೋಡಿ ಕೊಲೆ ಪ್ರಕರಣ ನಡೆದು 21 ದಿನಗಳಾದರೂ ಮೃತರು ಯಾರೆಂಬ ಮಾಹಿತಿಯೇ ದೊರೆತಿಲ್ಲ.ತಲೆನೋವಾಗಿರುವ ಪ್ರಕರಣದ ನಿಗೂಢ ರಹಸ್ಯ ಭೇಧಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ.ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಯುವಕರ ಶವದ ಬಗ್ಗೆ ಮಾಹಿತಿ ಕಲೆ ಹಾಕಲು ಪೊಲೀಸರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮಿಸ್ಸಿಂಗ್ ಕಂಪ್ಲೇಂಟ್ ಗಳು ಮೃತರ ಚಹರೆಗೆ ಹೋಲಿಕೆಯಾಗದಿರುವುದು ಪ್ರಕರಣದ ನಿಗೂಢತೆಯನ್ನ ಬಯಲಿಗೆಳೆಯಲು ಹಿನ್ನಡೆಯಾಗಿದೆ.ಸಧ್ಯದ ಪೊಲೀಸರ ತನಿಖೆಯಲ್ಲಿ ಮೃತರು ಹೊರರಾಜ್ಯದವರು ಇರಬಹುದೆಂದು ಶಂಕಿಸಿದ್ದಾರೆ.ಮೃತರ ಮಾಹಿತಿಯೇ ದೊರೆಯದ ಕಾರಣ ಹಂತಕರ ಪತ್ತೆ ಮತ್ತಷ್ಟು ಕಗ್ಗಂಟಾಗಿದೆ.ಯುವಕರ ಮಾಹಿತಿ ಪತ್ತೆಗೆ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.ಹೀಗಿದ್ದೂ ಯುವಕರ ಮಾಹಿತಿ ಪತ್ತೆ ವಿಳಂಬವಾಗಿದೆ.ಮೃತದೇಹವೊಂದರ ಕೈ ಮೇಲೆ VR POSTER 4B LEGEND ಎಂದು ಉಲ್ಲೇಖವಿರುವ ಹಚ್ಚೆ ಕಂಡು ಬಂದಿದೆ.ಮೃತರ ಬಗ್ಗೆ ಮಾಹಿತಿ ತಿಳಿದಲ್ಲಿ ಕೆ.ಆರ್.ನಗರ ಠಾಣೆ ಪೊಲೀಸರಿಗಾಗಲಿ ಅಥವಾ ಜಿಲ್ಲಾ ಪೊಲೀಸರಿಗೆ ತಿಳಿಸಬಹುದಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *