ಬೆಳ್ಳುಳ್ಳಿ ಕದ್ದು ಪರಾರಿಯಾಗಿದ್ದ ಆರೋಪಿ ಬಂಧನ…ಒಂದು ಲಕ್ಷ ಮೌಲ್ಯದ ಬೆಳ್ಳುಳ್ಳಿ ವಶ…
- TV10 Kannada Exclusive
- January 12, 2024
- No Comment
- 93
ಹುಣಸೂರು,ಜ12,Tv10 ಕನ್ನಡ
ಹುಣಸೂರಿನಲ್ಲಿ ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ
ಆರೋಪಿಯನ್ನ ಬಂಧಿಸಲಾಗಿದೆ. ಮಹಮದ್ ಅಜರ್ ಬಂಧಿತ ಆರೋಪಿ.
ಹುಣಸೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಮಹಮದ್ ಅನ್ಸರ್ ಅವರಿಗೆ ಸೇರಿದ್ದ
ಒಂದು ಲಕ್ಷ ಮೌಲ್ಯದ ಬೆಳ್ಳುಳ್ಳಿ ಕಳ್ಳತನ ಮಾಡಿ ಅಜರ್
ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ.
ಈ ಸಂಬಂಧ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಜರ್ ಬಂಧಿಸಿದ ಪೊಲೀಸರು ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ…