ಗಂಡ ಹೆಂಡತಿ ಜಗಳ ಬಿಡಿಸಲು ಬಂದ ಮಹಿಳೆ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ…

  • Crime
  • January 23, 2024
  • No Comment
  • 278

ಮೈಸೂರು,ಜ23,Tv10 ಕನ್ನಡ

ಗಂಡ ಹೆಂಡತಿ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ಮಹಿಳೆಗೆ ಚಾಕುವಿನಿಂದ ಇರಿದು ಕೊಂದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಅಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿ.2020 ರಲ್ಲಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರನಗೆರೆಯಲ್ಲಿ ಘಟನೆ ನಡೆದಿತ್ತು.ಲಷ್ಕರ್ ಠಾಣಾ ಪೊಲೀಸರು ಆರೋಪಿ ಅಲ್ವಿನ್ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಆರೋಪ ಸಾಬೀತಾದ ಹಿನ್ನಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ.ಎಂ.ಹಿರೇಮಠ್ ರವರು ತೀರ್ಪು ನೀಡಿದ್ದಾರೆ.ಹಾಗೂ 50 ಸಾವಿರ ದಂಡ ವಿಧಿಸಿದ್ದಾರೆ ದಂಡ ಕಟ್ಟಲು ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಸಜೆ ಅನುಭವಿಸುವ ತೀರ್ಪು ನೀಡಿದ್ದಾರೆ.

ಅಲ್ವಿನ್ ತನ್ನ ಪತ್ನಿ ಸೋನು ಜೊತೆ ಜಗಳ ಆಡುತ್ತಿದ್ದ ವೇಳೆ ಎದುರು ಮನೆಯಲ್ಲಿದ್ದ ಮಹದೇವಮ್ಮ ಬಿಡಿಸಲು ಬಂದಿದ್ದಾರೆ.ಈ ವೇಳೆ ಜಗಳ ಬಿಡಿಸಲು ನಿನ್ಯಾರು ಎಂದು ಪ್ರಶ್ನಿಸಿ ಚಾಕುವಿನಿಂದ ಇರಿದು ಕೊಂದಿದ್ದಾನೆ.ಆರೋಪಿಯನ್ನ ಅಂದಿನ ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಆರೋಪಕ್ಕೆ ಸಂಭಂಧಿಸಿದಂತೆ ಅಗತ್ಯ ದಾಖಲೆಗಳನ್ನ ಎಎಸ್ಸೈ ಸಿದ್ದರಾಜು ಸಿಬ್ಬಂದಿಗಳಾದ ಪ್ರಸನ್ನ ಶಂಭುಕರ,ಜನಾರ್ಧನ್ ಹಾಗೂ ಚಂದ್ರು ಸಂಗ್ರಹಿಸಿದ್ದರು.ಸರ್ಕಾರಿ ಅಭಿಯೋಜಕರಾದ ಹೆಚ್.ಇ.ಚಿನ್ನಪ್ಪ ಹಾಗೂ ಶ್ರೀಮತಿ ರಂಜನಾರಾವ್ ರವರು ವಾದ ಮಂಡಿಸಿದ್ದರು…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *