ಗಂಡ ಹೆಂಡತಿ ಜಗಳ ಬಿಡಿಸಲು ಬಂದ ಮಹಿಳೆ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ…

  • Crime
  • January 23, 2024
  • No Comment
  • 300

ಮೈಸೂರು,ಜ23,Tv10 ಕನ್ನಡ

ಗಂಡ ಹೆಂಡತಿ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ಮಹಿಳೆಗೆ ಚಾಕುವಿನಿಂದ ಇರಿದು ಕೊಂದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಅಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿ.2020 ರಲ್ಲಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರನಗೆರೆಯಲ್ಲಿ ಘಟನೆ ನಡೆದಿತ್ತು.ಲಷ್ಕರ್ ಠಾಣಾ ಪೊಲೀಸರು ಆರೋಪಿ ಅಲ್ವಿನ್ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಆರೋಪ ಸಾಬೀತಾದ ಹಿನ್ನಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ.ಎಂ.ಹಿರೇಮಠ್ ರವರು ತೀರ್ಪು ನೀಡಿದ್ದಾರೆ.ಹಾಗೂ 50 ಸಾವಿರ ದಂಡ ವಿಧಿಸಿದ್ದಾರೆ ದಂಡ ಕಟ್ಟಲು ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಸಜೆ ಅನುಭವಿಸುವ ತೀರ್ಪು ನೀಡಿದ್ದಾರೆ.

ಅಲ್ವಿನ್ ತನ್ನ ಪತ್ನಿ ಸೋನು ಜೊತೆ ಜಗಳ ಆಡುತ್ತಿದ್ದ ವೇಳೆ ಎದುರು ಮನೆಯಲ್ಲಿದ್ದ ಮಹದೇವಮ್ಮ ಬಿಡಿಸಲು ಬಂದಿದ್ದಾರೆ.ಈ ವೇಳೆ ಜಗಳ ಬಿಡಿಸಲು ನಿನ್ಯಾರು ಎಂದು ಪ್ರಶ್ನಿಸಿ ಚಾಕುವಿನಿಂದ ಇರಿದು ಕೊಂದಿದ್ದಾನೆ.ಆರೋಪಿಯನ್ನ ಅಂದಿನ ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಆರೋಪಕ್ಕೆ ಸಂಭಂಧಿಸಿದಂತೆ ಅಗತ್ಯ ದಾಖಲೆಗಳನ್ನ ಎಎಸ್ಸೈ ಸಿದ್ದರಾಜು ಸಿಬ್ಬಂದಿಗಳಾದ ಪ್ರಸನ್ನ ಶಂಭುಕರ,ಜನಾರ್ಧನ್ ಹಾಗೂ ಚಂದ್ರು ಸಂಗ್ರಹಿಸಿದ್ದರು.ಸರ್ಕಾರಿ ಅಭಿಯೋಜಕರಾದ ಹೆಚ್.ಇ.ಚಿನ್ನಪ್ಪ ಹಾಗೂ ಶ್ರೀಮತಿ ರಂಜನಾರಾವ್ ರವರು ವಾದ ಮಂಡಿಸಿದ್ದರು…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *