ಗಂಡ ಹೆಂಡತಿ ಜಗಳ ಬಿಡಿಸಲು ಬಂದ ಮಹಿಳೆ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ…

  • Crime
  • January 23, 2024
  • No Comment
  • 290

ಮೈಸೂರು,ಜ23,Tv10 ಕನ್ನಡ

ಗಂಡ ಹೆಂಡತಿ ಮಧ್ಯೆ ನಡೆಯುತ್ತಿದ್ದ ಜಗಳ ಬಿಡಿಸಲು ಬಂದ ಮಹಿಳೆಗೆ ಚಾಕುವಿನಿಂದ ಇರಿದು ಕೊಂದ ಆರೋಪಿಗೆ ಮೈಸೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಅಲ್ವಿನ್ ಜೀವಾವಧಿ ಶಿಕ್ಷೆಗೆ ಒಳಗಾದ ಅಪರಾಧಿ.2020 ರಲ್ಲಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ವೀರನಗೆರೆಯಲ್ಲಿ ಘಟನೆ ನಡೆದಿತ್ತು.ಲಷ್ಕರ್ ಠಾಣಾ ಪೊಲೀಸರು ಆರೋಪಿ ಅಲ್ವಿನ್ ವಿರುದ್ದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.ಆರೋಪ ಸಾಬೀತಾದ ಹಿನ್ನಲೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಭಾವತಿ.ಎಂ.ಹಿರೇಮಠ್ ರವರು ತೀರ್ಪು ನೀಡಿದ್ದಾರೆ.ಹಾಗೂ 50 ಸಾವಿರ ದಂಡ ವಿಧಿಸಿದ್ದಾರೆ ದಂಡ ಕಟ್ಟಲು ತಪ್ಪಿದ್ದಲ್ಲಿ ಒಂದು ವರ್ಷ ಸಾಮಾನ್ಯ ಸಜೆ ಅನುಭವಿಸುವ ತೀರ್ಪು ನೀಡಿದ್ದಾರೆ.

ಅಲ್ವಿನ್ ತನ್ನ ಪತ್ನಿ ಸೋನು ಜೊತೆ ಜಗಳ ಆಡುತ್ತಿದ್ದ ವೇಳೆ ಎದುರು ಮನೆಯಲ್ಲಿದ್ದ ಮಹದೇವಮ್ಮ ಬಿಡಿಸಲು ಬಂದಿದ್ದಾರೆ.ಈ ವೇಳೆ ಜಗಳ ಬಿಡಿಸಲು ನಿನ್ಯಾರು ಎಂದು ಪ್ರಶ್ನಿಸಿ ಚಾಕುವಿನಿಂದ ಇರಿದು ಕೊಂದಿದ್ದಾನೆ.ಆರೋಪಿಯನ್ನ ಅಂದಿನ ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.ಆರೋಪಕ್ಕೆ ಸಂಭಂಧಿಸಿದಂತೆ ಅಗತ್ಯ ದಾಖಲೆಗಳನ್ನ ಎಎಸ್ಸೈ ಸಿದ್ದರಾಜು ಸಿಬ್ಬಂದಿಗಳಾದ ಪ್ರಸನ್ನ ಶಂಭುಕರ,ಜನಾರ್ಧನ್ ಹಾಗೂ ಚಂದ್ರು ಸಂಗ್ರಹಿಸಿದ್ದರು.ಸರ್ಕಾರಿ ಅಭಿಯೋಜಕರಾದ ಹೆಚ್.ಇ.ಚಿನ್ನಪ್ಪ ಹಾಗೂ ಶ್ರೀಮತಿ ರಂಜನಾರಾವ್ ರವರು ವಾದ ಮಂಡಿಸಿದ್ದರು…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *