ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷನ ಕೊಲೆ ಪ್ರಕರಣ…ಆರೋಪಿ ಶಿವು ಬಂಧನ…

ನಂಜನಗೂಡು,ಜ24,Tv10 ಕನ್ನಡ

ಹಾಲು ಉತ್ಪಾದಕರಿಗೆ ನೀಡಬೇಕಾದ ಹಣ ಪಾವತಿಸುವಂತೆ ಬುದ್ದಿವಾದ ಹೇಳಿದ ಉಪಾಧ್ಯಕ್ಷನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣನಾದ ಕಾರ್ದರ್ಶಿಯನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಎಬ್ಜಾಲ ಗ್ರಾಮದ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವು ಬಂಧಿತ ಆರೋಪಿ. ಹಾಲು ಉತ್ಪಾದಕರಿಗೆ ಹಣ ನೀಡದೆ ಸತಾಯಿಸುತ್ತಿದ್ದ ಕಾರ್ಯದರ್ಶಿ ಶಿವು ಗೆ ಉಪಾಧ್ಯಕ್ಷ ಮಹದೇವನಾಯಕ ಬುದ್ದಿವಾದ ಹೇಳಿದ್ದರು.ಶಿವು ತಾಯಿ ರವಿಯಮ್ಮ ಗೆ ವಿಚಾರ ತಿಳಿಸಿ ಹಣ ಪಾವತಿಸುವಂತೆ ಹೇಳಿದ್ದರು.ಈ ವೇಳೆ ಶಿವು ಹಾಗೂ ಮಹದೇವನಾಯಕ ನಡುವೆ ಮಾತೊನ ಚಕಮಕಿ ನಡೆದಿತ್ತು.ಮಹದೇವನಾಯಕನಿಗೆ ಹಲ್ಲೆ ನಡೆಸಿದ್ದ ಶಿವು ನಾಪತ್ತೆಯಾಗಿದ್ದ.ಹಲ್ಲೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮಹದೇವನಾಯಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಪತಿಯ ಸಾವಿಗೆ ಶಿವು ಕಾರಣ ಎಂದು ಮಹದೇವನಾಯಕ ಪತ್ನಿ ಹುಲ್ಲಹಳ್ಳಿ ಠಾಣೆಗೆ ದೂರು ನೀಡಿ ತಾಯಿ ಹಾಗೂ ಮಗನ ವಿರುದ್ದ ಪ್ರಕರಣ ದಾಖಲಿಸಿದ್ದರು. ಹುಲ್ಲಹಳ್ಳಿ ಪೊಲೀಸರು ನಾಪತ್ತೆಯಾಗಿದ್ದ ಕಾರ್ಯದರ್ಶಿ ಶಿವು ನನ್ನು ಬಂಧಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *