ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷನ ಕೊಲೆ ಪ್ರಕರಣ…ಆರೋಪಿ ಶಿವು ಬಂಧನ…

ನಂಜನಗೂಡು,ಜ24,Tv10 ಕನ್ನಡ

ಹಾಲು ಉತ್ಪಾದಕರಿಗೆ ನೀಡಬೇಕಾದ ಹಣ ಪಾವತಿಸುವಂತೆ ಬುದ್ದಿವಾದ ಹೇಳಿದ ಉಪಾಧ್ಯಕ್ಷನ ಮೇಲೆ ಹಲ್ಲೆ ನಡೆಸಿ ಸಾವಿಗೆ ಕಾರಣನಾದ ಕಾರ್ದರ್ಶಿಯನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ತಾಲೂಕಿನ ಎಬ್ಜಾಲ ಗ್ರಾಮದ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶಿವು ಬಂಧಿತ ಆರೋಪಿ. ಹಾಲು ಉತ್ಪಾದಕರಿಗೆ ಹಣ ನೀಡದೆ ಸತಾಯಿಸುತ್ತಿದ್ದ ಕಾರ್ಯದರ್ಶಿ ಶಿವು ಗೆ ಉಪಾಧ್ಯಕ್ಷ ಮಹದೇವನಾಯಕ ಬುದ್ದಿವಾದ ಹೇಳಿದ್ದರು.ಶಿವು ತಾಯಿ ರವಿಯಮ್ಮ ಗೆ ವಿಚಾರ ತಿಳಿಸಿ ಹಣ ಪಾವತಿಸುವಂತೆ ಹೇಳಿದ್ದರು.ಈ ವೇಳೆ ಶಿವು ಹಾಗೂ ಮಹದೇವನಾಯಕ ನಡುವೆ ಮಾತೊನ ಚಕಮಕಿ ನಡೆದಿತ್ತು.ಮಹದೇವನಾಯಕನಿಗೆ ಹಲ್ಲೆ ನಡೆಸಿದ್ದ ಶಿವು ನಾಪತ್ತೆಯಾಗಿದ್ದ.ಹಲ್ಲೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮಹದೇವನಾಯಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.ಪತಿಯ ಸಾವಿಗೆ ಶಿವು ಕಾರಣ ಎಂದು ಮಹದೇವನಾಯಕ ಪತ್ನಿ ಹುಲ್ಲಹಳ್ಳಿ ಠಾಣೆಗೆ ದೂರು ನೀಡಿ ತಾಯಿ ಹಾಗೂ ಮಗನ ವಿರುದ್ದ ಪ್ರಕರಣ ದಾಖಲಿಸಿದ್ದರು. ಹುಲ್ಲಹಳ್ಳಿ ಪೊಲೀಸರು ನಾಪತ್ತೆಯಾಗಿದ್ದ ಕಾರ್ಯದರ್ಶಿ ಶಿವು ನನ್ನು ಬಂಧಿಸಿದ್ದಾರೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *