ಹುಡುಗಿ ಚುಡಾಯಿಸಿದ ವಿಚಾರದಲ್ಲಿ ಕಿರಿಕ್…ಆಟೋ ಡ್ರೈವರ್ ಕೊಲೆ…ರೌಡಿ ಶೀಟರ್ ಸೇರಿದಂತೆ ಮೂವರಿಂದ ಕೃತ್ಯ…

  • Crime
  • January 27, 2024
  • No Comment
  • 599

ಮೈಸೂರು,ಜ27,Tv10 ಕನ್ನಡ

ಹುಡುಗಿ ಚುಡಾಯಿಸಿದ ಹಿನ್ನಲೆ ಹಾಗೂ ಹಳೇ ದ್ವೇಷ ಬೆಳೆಸಿಕೊಂಡ ರೌಡಿ ಶೀಟರ್ ತನ್ನ ಸಹೋದರ ಹಾಗೂ ಸಂಭಂಧಿಕರ ಜೊತೆ ಸೇರಿ ಆಟೋ ಡ್ರೈವರ್ ಗೆ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ನಡೆದಿದೆ.ಗೂಡ್ಸ್ ಆಟೋ ಡ್ರೈವರ್ ಆಗಿರುವ ರವಿಚಂದ್ರ(33) ಮೃತ ದುರ್ದೈವಿ.ರೌಡಿ ಶೀಟರ್ ಸುನಿಲ್ ರಾಜ್,ಈತನ ತಮ್ಮ ನಿಖಿಲ್ ರಾಜ್ ಹಾಗೂ ಇವರ ಚಿಕ್ಕಪ್ಪ ನಾರಾಯಣ ಕೊಲೆ ಆರೋಪಿಗಳು.

ಮೃತನ ತಮ್ಮ ಶಿವರಾಜ್ ಗಾರೆ ಕೆಲಸ ಮಾಡಿಕೊಂಡಿದ್ದು ಈತನ ಸಹಚರನೊಬ್ಬ ಸುನಿಲ್ ರಾಜ್ ಗೆ ಪರಿಚಯ ಇರುವ ಹುಡುಗಿಗೆ ಚುಡಾಯಿಸಿದ್ದಾನೆ.ಈ ವೇಳೆ ಗಲಾಟೆ ಆಗಿದ್ದು ಶಿವರಾಜ್ ಮಧ್ಯೆ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.ಇದನ್ನೇ ದ್ವೇಷ ಬೆಳೆಸಿಕೊಂಡ ಸುನಿಲ್ ರಾಜ್ ಹಾಗೂ ನಿಖಿಲ್ ರಾಜ್ ನಿನ್ನೆ ರಾತ್ರಿ ಚಿಕ್ಕಪ್ಪ ನಾರಾಯಣ್ ಜೊತೆ ರವಿಚಂದ್ರ ಮನೆ ಬಳಿ ಬಂದು ಅವ್ಯಾಚ ಶಬ್ದಗಳಿಂದ ಆವಾಜ್ ಹಾಕಿದ್ದಾರೆ.ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.ಈ ವೇಳೆ ಸುನಿಲ್ ರಾಜ್ ಡ್ರಾಗನ್ ನಿಂದ ರವಿಚಂದ್ ಹೊಟ್ಟೆಗೆ ಚುಚ್ಚಿದ್ದಾನೆ.ಜಗಳ ಬಿಡಿಸಲು ಬಂದ ಶಿವರಾಜ್ ಹಾಗೂ ಮಾವ ಮಹೇಶ್ ಗೂ ಗಾಯವಾಗಿದೆ.ಚಾಕು ಇರಿತದಿಂದ ಗಾಯಗೊಂಡ ರವಿಚಂದ್ರ ನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಈ ಸಂಭಂಧ ಸುನಿಲ್ ರಾಜ್,ನಿಖಿಲ್ ರಾಜ್ ಹಾಗೂ ನಾರಾಯಣ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *