ಹುಡುಗಿ ಚುಡಾಯಿಸಿದ ವಿಚಾರದಲ್ಲಿ ಕಿರಿಕ್…ಆಟೋ ಡ್ರೈವರ್ ಕೊಲೆ…ರೌಡಿ ಶೀಟರ್ ಸೇರಿದಂತೆ ಮೂವರಿಂದ ಕೃತ್ಯ…

  • Crime
  • January 27, 2024
  • No Comment
  • 578

ಮೈಸೂರು,ಜ27,Tv10 ಕನ್ನಡ

ಹುಡುಗಿ ಚುಡಾಯಿಸಿದ ಹಿನ್ನಲೆ ಹಾಗೂ ಹಳೇ ದ್ವೇಷ ಬೆಳೆಸಿಕೊಂಡ ರೌಡಿ ಶೀಟರ್ ತನ್ನ ಸಹೋದರ ಹಾಗೂ ಸಂಭಂಧಿಕರ ಜೊತೆ ಸೇರಿ ಆಟೋ ಡ್ರೈವರ್ ಗೆ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ನಡೆದಿದೆ.ಗೂಡ್ಸ್ ಆಟೋ ಡ್ರೈವರ್ ಆಗಿರುವ ರವಿಚಂದ್ರ(33) ಮೃತ ದುರ್ದೈವಿ.ರೌಡಿ ಶೀಟರ್ ಸುನಿಲ್ ರಾಜ್,ಈತನ ತಮ್ಮ ನಿಖಿಲ್ ರಾಜ್ ಹಾಗೂ ಇವರ ಚಿಕ್ಕಪ್ಪ ನಾರಾಯಣ ಕೊಲೆ ಆರೋಪಿಗಳು.

ಮೃತನ ತಮ್ಮ ಶಿವರಾಜ್ ಗಾರೆ ಕೆಲಸ ಮಾಡಿಕೊಂಡಿದ್ದು ಈತನ ಸಹಚರನೊಬ್ಬ ಸುನಿಲ್ ರಾಜ್ ಗೆ ಪರಿಚಯ ಇರುವ ಹುಡುಗಿಗೆ ಚುಡಾಯಿಸಿದ್ದಾನೆ.ಈ ವೇಳೆ ಗಲಾಟೆ ಆಗಿದ್ದು ಶಿವರಾಜ್ ಮಧ್ಯೆ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.ಇದನ್ನೇ ದ್ವೇಷ ಬೆಳೆಸಿಕೊಂಡ ಸುನಿಲ್ ರಾಜ್ ಹಾಗೂ ನಿಖಿಲ್ ರಾಜ್ ನಿನ್ನೆ ರಾತ್ರಿ ಚಿಕ್ಕಪ್ಪ ನಾರಾಯಣ್ ಜೊತೆ ರವಿಚಂದ್ರ ಮನೆ ಬಳಿ ಬಂದು ಅವ್ಯಾಚ ಶಬ್ದಗಳಿಂದ ಆವಾಜ್ ಹಾಕಿದ್ದಾರೆ.ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.ಈ ವೇಳೆ ಸುನಿಲ್ ರಾಜ್ ಡ್ರಾಗನ್ ನಿಂದ ರವಿಚಂದ್ ಹೊಟ್ಟೆಗೆ ಚುಚ್ಚಿದ್ದಾನೆ.ಜಗಳ ಬಿಡಿಸಲು ಬಂದ ಶಿವರಾಜ್ ಹಾಗೂ ಮಾವ ಮಹೇಶ್ ಗೂ ಗಾಯವಾಗಿದೆ.ಚಾಕು ಇರಿತದಿಂದ ಗಾಯಗೊಂಡ ರವಿಚಂದ್ರ ನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಈ ಸಂಭಂಧ ಸುನಿಲ್ ರಾಜ್,ನಿಖಿಲ್ ರಾಜ್ ಹಾಗೂ ನಾರಾಯಣ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ…

ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ ನಯನ ಕುಕ್ಕೂರು, ಅನುಶ್ರೀಗೆ ಭರ್ಜರಿ ಸಾಧನೆ ಮೈಸೂರು:ಮೈಸೂರಿನಲ್ಲಿ 01/02/2026 ರಂದು ನಡೆದ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಫೆಸ್ಟ್‌ನಲ್ಲಿ ಮೈಸೂರಿನ…
ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

ಅಭಿಮಾನಿಗಳೊಂದಿಗೆ ಅಭಿಮಾನ ಹಂಚಿಕೊಂಡ ಡಾ.ಚೇತನ

*ಬಿಜಾಪುರ ಜಿಲ್ಲೆ ಇಂಡಿ ಪಟ್ಟಣದ ಅದ್ಭುತ ಪ್ರತಿಭೆ ತಮ್ಮ ರಾಷ್ಟ್ರಮಟ್ಟದ ಬಹು ಪ್ರಶಸ್ತಿಗಳ ಮೂಲಕ ದೇಶಕ್ಕೆ ನಾಡಿಗೆ ಮತ್ತೆ ಹುಟ್ಟುರಿಗೆ ಕೀರ್ತಿ ತಂದಿದ್ದಾರೆ ಚೇತನ ಬಸವರಾಜ ಮೂರಮನ ಕ್ಷಮಿಸಿ…
ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ…

ಫೋಕಸ್ ಲೈಟ್ ಮೇಲೆ ಬಸವೇಶ್ವರ ಭಾವಚಿತ್ರವಿರುವ ಬಾವುಟ ತಂದ ವಿವಾದ…ಅರ್ಧಕ್ಕೆ ಸ್ಥಗಿತಗೊಂಡ ಜಾತ್ರೆ…ರಸ್ತೆ ಮಧ್ಯದಲ್ಲಿ ನಿಂತ ತೇರು…ದೇವಾಲಯಕ್ಕೆ ಬೀಗ…ಗ್ರಾಮದಲ್ಲಿ ಬಿಗುವಿನ ವಾತಾವರಣ… ನಂಜನಗೂಡು,ಜ31,Tv10 ಕನ್ನಡ ಗ್ರಾಮದ ಫೋಕಸ್ ಲೈಟ್…

Leave a Reply

Your email address will not be published. Required fields are marked *