ಹುಡುಗಿ ಚುಡಾಯಿಸಿದ ವಿಚಾರದಲ್ಲಿ ಕಿರಿಕ್…ಆಟೋ ಡ್ರೈವರ್ ಕೊಲೆ…ರೌಡಿ ಶೀಟರ್ ಸೇರಿದಂತೆ ಮೂವರಿಂದ ಕೃತ್ಯ…

  • Crime
  • January 27, 2024
  • No Comment
  • 562

ಮೈಸೂರು,ಜ27,Tv10 ಕನ್ನಡ

ಹುಡುಗಿ ಚುಡಾಯಿಸಿದ ಹಿನ್ನಲೆ ಹಾಗೂ ಹಳೇ ದ್ವೇಷ ಬೆಳೆಸಿಕೊಂಡ ರೌಡಿ ಶೀಟರ್ ತನ್ನ ಸಹೋದರ ಹಾಗೂ ಸಂಭಂಧಿಕರ ಜೊತೆ ಸೇರಿ ಆಟೋ ಡ್ರೈವರ್ ಗೆ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಡಕಳ್ಳಿ ಗ್ರಾಮದಲ್ಲಿ ನಡೆದಿದೆ.ಗೂಡ್ಸ್ ಆಟೋ ಡ್ರೈವರ್ ಆಗಿರುವ ರವಿಚಂದ್ರ(33) ಮೃತ ದುರ್ದೈವಿ.ರೌಡಿ ಶೀಟರ್ ಸುನಿಲ್ ರಾಜ್,ಈತನ ತಮ್ಮ ನಿಖಿಲ್ ರಾಜ್ ಹಾಗೂ ಇವರ ಚಿಕ್ಕಪ್ಪ ನಾರಾಯಣ ಕೊಲೆ ಆರೋಪಿಗಳು.

ಮೃತನ ತಮ್ಮ ಶಿವರಾಜ್ ಗಾರೆ ಕೆಲಸ ಮಾಡಿಕೊಂಡಿದ್ದು ಈತನ ಸಹಚರನೊಬ್ಬ ಸುನಿಲ್ ರಾಜ್ ಗೆ ಪರಿಚಯ ಇರುವ ಹುಡುಗಿಗೆ ಚುಡಾಯಿಸಿದ್ದಾನೆ.ಈ ವೇಳೆ ಗಲಾಟೆ ಆಗಿದ್ದು ಶಿವರಾಜ್ ಮಧ್ಯೆ ಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.ಇದನ್ನೇ ದ್ವೇಷ ಬೆಳೆಸಿಕೊಂಡ ಸುನಿಲ್ ರಾಜ್ ಹಾಗೂ ನಿಖಿಲ್ ರಾಜ್ ನಿನ್ನೆ ರಾತ್ರಿ ಚಿಕ್ಕಪ್ಪ ನಾರಾಯಣ್ ಜೊತೆ ರವಿಚಂದ್ರ ಮನೆ ಬಳಿ ಬಂದು ಅವ್ಯಾಚ ಶಬ್ದಗಳಿಂದ ಆವಾಜ್ ಹಾಕಿದ್ದಾರೆ.ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.ಈ ವೇಳೆ ಸುನಿಲ್ ರಾಜ್ ಡ್ರಾಗನ್ ನಿಂದ ರವಿಚಂದ್ ಹೊಟ್ಟೆಗೆ ಚುಚ್ಚಿದ್ದಾನೆ.ಜಗಳ ಬಿಡಿಸಲು ಬಂದ ಶಿವರಾಜ್ ಹಾಗೂ ಮಾವ ಮಹೇಶ್ ಗೂ ಗಾಯವಾಗಿದೆ.ಚಾಕು ಇರಿತದಿಂದ ಗಾಯಗೊಂಡ ರವಿಚಂದ್ರ ನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಈ ಸಂಭಂಧ ಸುನಿಲ್ ರಾಜ್,ನಿಖಿಲ್ ರಾಜ್ ಹಾಗೂ ನಾರಾಯಣ ವಿರುದ್ದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *