ಸಾಲಗಾರರ ಹಾವಳಿ ಹಿನ್ನಲೆ…ಇಡೀ ಕುಟುಂಬ ಮಿಸ್ಸಿಂಗ್…ಡೆತ್ ನೋಟ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆ…

ಮೈಸೂರು,ಜ29,Tv10 ಕನ್ನಡ

ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆಯಾದ ಘಟನೆ ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರೊಬ್ಬರ ಮೊಬೈಲ್ ಗೆ ವಾಯ್ಸ್ ಮೆಸೇಜ್ ಕಳುಹಿಸಿ ನಾಪತ್ತೆಯಾಗಿದೆ.ಇಡೀ ಕುಟುಂಬ ನಾಪತ್ತೆಯಾಗಿ 8 ದಿನ ಕಳೆದರೂ ಸುಳಿವು ಪತ್ತೆಯಾಗಿಲ್ಲ.

ಕೆ.ಜಿ.ಕೊಪ್ಪಲಿನ ಮಹೇಶ್(35),ಈತನ ಪತ್ನಿ ಭವಾನಿ(28),ಪುತ್ರಿ ಪ್ರೇಕ್ಷಾ(3) ಇವರ ತಂದೆ ಮಹದೇವಪ್ಪ(65) ಹಾಗೂ ತಾಯಿ ಸುಮಿತ್ರ(55) ನಾಪತ್ತೆಯಾದವರು.ಈ ಸಂಭಂಧ ಭವಾನಿ ಸಹೋದರ ಜಗದೀಶ್ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ.ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್ ವೀರೇಶ್ ಎಂಬುವರ ವ್ಯವಹಾರಕ್ಕೆ ಸಾಥ್ ನೀಡಿದ್ದಾರೆ.ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ 35 ಲಕ್ಷ ಸಾಲ ಪಡೆದಿದ್ದಾನೆ.ವ್ಯವಹಾರದಲ್ಲಿ ನಷ್ಟವಾದ ಕಾರಣ ವೀರೇಶ್ ರಾತ್ರೋ ರಾತ್ರಿ ಎಸ್ಕೇಪ್ ಆಗಿದ್ದಾನೆ.ವೀರೇಶ್ ಗೆ ಸಾಲ ನೀಡಿದ ಮಂದಿ ಮಹೇಶ್ ಮೇಲೆ ಒತ್ತಡ ಹೇರಿದ್ದಾರೆ.ಪ್ರಾರಂಭದಲ್ಲಿ 2 ಲಕ್ಷಕ್ಕೆ ಗ್ಯಾರೆಂಟಿ ಕೊಟ್ಟ ಮಹೇಶ್ ನಂತರ ಚಕ್ರವ್ಯೂಹದಲ್ಲಿ ಸಿಲುಕಿದ್ದಾರೆ.ಸಾಲಗಾರರ ನಿರಂತರ ಒತ್ತಡಕ್ಕೆ ಹೆದರಿದ ಮಹೇಶ್ ತಮ್ಮ ಸ್ನೇಹಿತರಾದ ದರ್ಶನ್ ಎಂಬುವರ ಮೊಬೈಲ್ ಗೆ ವಾಯ್ಸ್ ಮೆಸೇಜ್ ಮಾಡಿದ್ದಾರೆ. ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದೆ.ಸಾಲಗಾರರು ನನಗೆ ತೊಂದರೆ ಕೊಡುತ್ತಿದ್ದಾರೆ.ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.ಸಾಲಗಾರರು ರಾಕ್ಷಸರಂತೆ ವರ್ತಿಸುತ್ತಿದ್ದಾರೆ.ನಾವು ಕೆರೆ ಅಥವಾ ಭಾವಿಗೆ ಬೀಳುತ್ತೇವೆ.ಒಂದು ವೇಳೆ ಮೃತದೇಹ ದೊರೆತರೆ ಅಂತ್ಯಕ್ರಿಯೆ ಮಾಡಿ.ಅವರನ್ನಂತೂ ಬಿಡಬೇಡಿ ಎಂದು ರಂಜಿತಾ,ದಿನೇಶ್,ಚಂದ್ರು ಹಾಗೂ ನೇತ್ರ ಎಂಬುವರ ಹೆಸರನ್ನ ವಾಯ್ಸ್ ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾರೆ. ಜನವರಿ 20 ರಂದು ಕಾಣೆಯಾದ ಇವರು ಇದುವರೆಗೂ ಪತ್ತೆಯಾಗಿರುವುದಿಲ್ಲ.ಸರಸ್ವತಿ ಪುರಂ ಠಾಣೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಾಗಿದೆ.ಇವರ ಪತ್ತೆಗೆ ಪೊಲೀಸರು ಶ್ರಮಿಸುತ್ತಿದ್ದಾರೆ.ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗಾಗಲಿ ಅಥವಾ ಸರಸ್ವತಿಪುರಂ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸಬಹುದು…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *