ಕಾರು ಢಿಕ್ಕಿ…ಭಾರಿ ಗಾತ್ರದ ಹುಲಿ ಸಾವು…ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಘಟನೆ…

ಮೈಸೂರು,ಜ29,Tv10 ಕನ್ನಡ

ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.ನಿನ್ನೆ ತಡರಾತ್ರಿ ಸುಮಾರು 12 ಗಂಟೆ ವೇಳೆಗೆ ಘಟನೆ ನಡೆದಿದೆ.ಇಟಿಯೋಸ್ ಕಾರ್ ಹುಲಿಗೆ ಢಿಕ್ಕಿ ಹೊಡೆದಿದೆ.ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಸಧ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.ಅಪಘಾತವಾದ ಕಾರನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಪ್ರಯಾಣಿಕರನ್ನ ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *