ಕಾರು ಢಿಕ್ಕಿ…ಭಾರಿ ಗಾತ್ರದ ಹುಲಿ ಸಾವು…ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಘಟನೆ…

ಮೈಸೂರು,ಜ29,Tv10 ಕನ್ನಡ

ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ.ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ.ನಿನ್ನೆ ತಡರಾತ್ರಿ ಸುಮಾರು 12 ಗಂಟೆ ವೇಳೆಗೆ ಘಟನೆ ನಡೆದಿದೆ.ಇಟಿಯೋಸ್ ಕಾರ್ ಹುಲಿಗೆ ಢಿಕ್ಕಿ ಹೊಡೆದಿದೆ.ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.ಸಧ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ.ಅಪಘಾತವಾದ ಕಾರನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಪ್ರಯಾಣಿಕರನ್ನ ವಿಚಾರಣೆ ನಡೆಸುತ್ತಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *