ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹ…ಅಂಕೊಲಾಜಿ ಬಗ್ಗೆ ಮಹಿಳೆಯರಿಗೆ ಕಾರ್ಯಾಗಾರ…

ಮೈಸೂರು,ಫೆ1,Tv10 ಕನ್ನಡ

ವಿಶ್ವ ಕ್ಯಾನ್ಸರ್ ಜಾಗೃತಿ ಸಪ್ತಾಹದ ಅಂಗವಾಗಿ ಇಂದು ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳೆಯರಿಗೆ ಅಂಕೋಲಾಜಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಮೈಸೂರಿನ ಮರುಳೆೇಶ್ವರ ನೇಗಿಲಯೋಗಿ ಸೇವಾಭವನದಲ್ಲಿ ನಡೆದ ಕಾರ್ಯಕ್ರಮವನ್ನ ….ಉದ್ಘಾಟಿಸಿದರು.
ಮಹಿಳೆಯರಲ್ಲಿ ಸಾಮಾನ್ಯವಾಗಿ ಕಂಡುಬರುವ ಸ್ತ್ರೀರೋಗಶಾಸ್ತ್ರದ ಆಂಕೊಲಾಜಿಯ ಕಾರ್ಯಾಗಾರದಲ್ಲಿ ತಿಳುವಳಿಕೆ ಮೂಡಿಸಲಾಯಿತು.ಕಾರ್ಯಾಗಾರದಲ್ಲಿ ಸ್ತ್ರೀರೋಗಶಾಸ್ತ್ರದ ಆಂಕೊಲಾಜಿಯು ಮಹಿಳೆಯರಿಗೆ ನಿರ್ದಿಷ್ಟವಾದ ಕ್ಯಾನ್ಸರ್ ಗಳಾದ ಗರ್ಭಕಂಠದ ಕ್ಯಾನ್ಸರ್, ಸ್ಥನದ ಕ್ಯಾನ್ಸರ್, ಎಂಡೊಮೆಟ್ರಿಯಲ್ ಕ್ಯಾನ್ಸರ್, ಅಂಡಾಶಯದ ಕ್ಯಾನ್ಸರ್, ವಾಲ್ವಾರ್ ಕ್ಯಾನ್ಸರ್ ಗಳ ಅಪಾಯದ ಅಂಶಗಳು,ಸಾಮಾನ್ಯ ಲಕ್ಷಣಗಳು, ತಡೆಗಟ್ಟುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಾಗಾರದಲ್ಲಿ ಅವಂತ್ ಬಿ ಕೆ ಜಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞೆ ಮತ್ತು ಕ್ಯಾನ್ಸರ್ ರೋಗ ತಜ್ಞೆ (ಆನ್ಕೊಲೊಜಿಸ್ಟ್ )ಆಗಿ ಕಾರ್ಯನಿರ್ವಹಸುತ್ತಿರುವ ಡಾ.ಡಿ ಆರ್ ರಮ್ಯಾ . ರವರು HPV ಲಸಿಕೆ, ಸ್ಕ್ರೀನಿಂಗ್, PAP ಸ್ಮೀಯರ್ / HPV ಡಿಎನ್ಎ ಪರೀಕ್ಷೆ, MRI ಮತ್ತು ಮ್ಯಾಮೊಗ್ರಾಮ್ ಸ್ಕ್ರೀನಿಂಗ್ ಹೀಗೇ ಮುಂತಾದ ಪರೀಕ್ಷೆಗಳನ್ನು ಯಾವ ಸಂದರ್ಭಗಳಲ್ಲಿ ಮಾಡಲಾಗುವುದು ಎಂದು ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಸದಸ್ಯರೊಂದಿಗೆ ಸಂವಾದವನ್ನು ಏರ್ಪಾಡಿಸಲಾಗಿತ್ತು. ಮಹಿಳೆಯರು ತಮ್ಮೆಲ್ಲ ಸಂದೇಹಗಳಿಗೆ ಉತ್ತರವನ್ನು ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಶ್ರೀಮತಿ ಜೆ ಶೋಭ ರವರು ವಹಿಸಿದ್ದರು.ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಹಲವಾರು ಮಹಿಳೆಯರು ಅಗತ್ಯ ಮಾಹಿತಿಯನ್ನು ಪಡೆದುಕೊಂಡರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *