ಕುಡುಕರ ಅಡ್ಡೆಯಾದ ಅಪೂರ್ಣಗೊಂಡ ಅಂಗನವಾಡಿ ಕೇಂದ್ರ…ಕುರಿದೊಡ್ಡಿ ಆಶ್ರಯ ಪಡೆದ ಮಕ್ಕಳು…

ಮೈಸೂರು,ಫೆ1,Tv10 ಕನ್ನಡ

ಅಪೂರ್ಣಗೊಂಡ ಅಂಗನವಾಡಿ ಕೇಂದ್ರವೊಂದು ಕುಡುಕರ ಅಡ್ಡೆಯಾಗಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.ಮಕ್ಕಳಿಗರ ಪಾಠಪ್ರವಚನ ನಡೆಯಬೇಕಿದ್ದ ಸ್ಥಳದಲ್ಲಿ ಮಧ್ಯದ ಬಾಟಲಿಗಳು ಪ್ಯಾಕೆಟ್ ಗಳ ರಾಶಿ ತುಂಬಿ ಅಧಿಕಾರಿಗಳನ್ನ ಹಂಗಿಸುವಂತೆ ಮಾಡಿದೆ.ಅಂಗನವಾಡಿಯಲ್ಲಿ ಪಾಠ ಪ್ರವಚನ ಕೇಳಬೇಕಿದ್ದ ಮಕ್ಕಳು ಕುರಿದೊಡ್ಡಿ ಆಶ್ರಯ ಪಡೆದಿದ್ದಾರೆ.

ಮೈಸೂರು ತಾಲೂಕು ಜಯಪುರ ಹೋಬಳಿ ಹನಗಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ದುಃಸ್ಥಿತಿ ಇದು.6 ವರ್ಷಗಳ ಹಿಂದೆ ಅಂಗನವಾಡಿಗಾಗಿ ಕಟ್ಟಡ ಕಾಮಗಾರಿ ಆರಂಭವಾಯಿತು.ಅದ್ಯಾವ ಕಾರಣವೋ ಗೊತ್ತಿಲ್ಲ ಅರ್ಧಕ್ಕೇ ಕಾಮಗಾರಿ ಸ್ಥಗಿತಗೊಂಡಿದೆ.ಮಕ್ಕಳ ಶೈಕ್ಷಣಿಕ ಚಟುವಟಿಕೆಗಾಗಿ ಬಳಕೆಯಾಗಬೇಕಿದ್ದ ಕಟ್ಟಡ ಪೂರ್ಣಗೊಳ್ಳದೇ ಕುಡುಕರ ಅಡ್ಡೆಯಾಗಿದೆ.ಪ್ರತಿದಿನ ಮಧ್ಯಪ್ರಿಯರು ಅಪೂರ್ಣಗೊಂಡ ಅಂಗನವಾಡಿ ಕಟ್ಟಡವನ್ನ ತಮ್ಮ ಅಡ್ಡೆಯಾಗಿ ಬಳಸಿಕೊಳ್ಳುತ್ತಿದ್ದಾರೆ.ಕುಡುಕರ ವರ್ತನೆಯಿಂದ ಸ್ಥಳೀಯರು ಬೇಸತ್ತಿದ್ದಾರೆ.ಈ ಬಗ್ಗೆ ಸಂಭಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಕ್ಯಾರೆ ಅನ್ನುತ್ತಿಲ್ಲ.ಲಕ್ಷಾಂತರ ವೆಚ್ಚದಲ್ಲಿ ಆರಂಭವಾದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳು ಉರುಳುತ್ತಾ ಬಂದರೂ ಯಾರೂ ಇತ್ತ ತಿರುಗಿ ನೋಡುತ್ತಿಲ್ಲ.ಕೂಡಲೇ ಸಂಭಂಧ ಪಟ್ಟ ಅಧಿಕಾರಿಯಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಎಚ್ಚೆತ್ತು ಅಂಗನವಾಡಿ ಕಟ್ಟಡವನ್ನ ಪೂರ್ಣಗೊಳಿಸುವತ್ತ ಗಮನ ಹರಿಸಬೇಕಿದೆ.ಕುರಿದೊಡ್ಡಿಯಲ್ಲಿ ಪಾಠ ಪ್ರವಚನಗಳನ್ನ ಕೇಳುತ್ತಿರುವ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *