ಕುಡುಕರ ಅಡ್ಡೆಯಾದ ಅಪೂರ್ಣಗೊಂಡ ಅಂಗನವಾಡಿ ಕೇಂದ್ರ…ಕುರಿದೊಡ್ಡಿ ಆಶ್ರಯ ಪಡೆದ ಮಕ್ಕಳು…

ಮೈಸೂರು,ಫೆ1,Tv10 ಕನ್ನಡ

ಅಪೂರ್ಣಗೊಂಡ ಅಂಗನವಾಡಿ ಕೇಂದ್ರವೊಂದು ಕುಡುಕರ ಅಡ್ಡೆಯಾಗಿ ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ.ಮಕ್ಕಳಿಗರ ಪಾಠಪ್ರವಚನ ನಡೆಯಬೇಕಿದ್ದ ಸ್ಥಳದಲ್ಲಿ ಮಧ್ಯದ ಬಾಟಲಿಗಳು ಪ್ಯಾಕೆಟ್ ಗಳ ರಾಶಿ ತುಂಬಿ ಅಧಿಕಾರಿಗಳನ್ನ ಹಂಗಿಸುವಂತೆ ಮಾಡಿದೆ.ಅಂಗನವಾಡಿಯಲ್ಲಿ ಪಾಠ ಪ್ರವಚನ ಕೇಳಬೇಕಿದ್ದ ಮಕ್ಕಳು ಕುರಿದೊಡ್ಡಿ ಆಶ್ರಯ ಪಡೆದಿದ್ದಾರೆ.

ಮೈಸೂರು ತಾಲೂಕು ಜಯಪುರ ಹೋಬಳಿ ಹನಗಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದ ದುಃಸ್ಥಿತಿ ಇದು.6 ವರ್ಷಗಳ ಹಿಂದೆ ಅಂಗನವಾಡಿಗಾಗಿ ಕಟ್ಟಡ ಕಾಮಗಾರಿ ಆರಂಭವಾಯಿತು.ಅದ್ಯಾವ ಕಾರಣವೋ ಗೊತ್ತಿಲ್ಲ ಅರ್ಧಕ್ಕೇ ಕಾಮಗಾರಿ ಸ್ಥಗಿತಗೊಂಡಿದೆ.ಮಕ್ಕಳ ಶೈಕ್ಷಣಿಕ ಚಟುವಟಿಕೆಗಾಗಿ ಬಳಕೆಯಾಗಬೇಕಿದ್ದ ಕಟ್ಟಡ ಪೂರ್ಣಗೊಳ್ಳದೇ ಕುಡುಕರ ಅಡ್ಡೆಯಾಗಿದೆ.ಪ್ರತಿದಿನ ಮಧ್ಯಪ್ರಿಯರು ಅಪೂರ್ಣಗೊಂಡ ಅಂಗನವಾಡಿ ಕಟ್ಟಡವನ್ನ ತಮ್ಮ ಅಡ್ಡೆಯಾಗಿ ಬಳಸಿಕೊಳ್ಳುತ್ತಿದ್ದಾರೆ.ಕುಡುಕರ ವರ್ತನೆಯಿಂದ ಸ್ಥಳೀಯರು ಬೇಸತ್ತಿದ್ದಾರೆ.ಈ ಬಗ್ಗೆ ಸಂಭಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಕ್ಯಾರೆ ಅನ್ನುತ್ತಿಲ್ಲ.ಲಕ್ಷಾಂತರ ವೆಚ್ಚದಲ್ಲಿ ಆರಂಭವಾದ ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತು ವರ್ಷಗಳು ಉರುಳುತ್ತಾ ಬಂದರೂ ಯಾರೂ ಇತ್ತ ತಿರುಗಿ ನೋಡುತ್ತಿಲ್ಲ.ಕೂಡಲೇ ಸಂಭಂಧ ಪಟ್ಟ ಅಧಿಕಾರಿಯಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಎಚ್ಚೆತ್ತು ಅಂಗನವಾಡಿ ಕಟ್ಟಡವನ್ನ ಪೂರ್ಣಗೊಳಿಸುವತ್ತ ಗಮನ ಹರಿಸಬೇಕಿದೆ.ಕುರಿದೊಡ್ಡಿಯಲ್ಲಿ ಪಾಠ ಪ್ರವಚನಗಳನ್ನ ಕೇಳುತ್ತಿರುವ ಮಕ್ಕಳಿಗೆ ಅನುಕೂಲ ಮಾಡಿಕೊಡಬೇಕಿದೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *