ನಿರ್ಲಕ್ಷ್ಯಕ್ಕೆ ಒಳಗಾದ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು…ಕಾಯಕಲ್ಪ ಒದಗಿಸುವರೇ ಅಧಿಕಾರಿಗಳು…?

ನಿರ್ಲಕ್ಷ್ಯಕ್ಕೆ ಒಳಗಾದ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು…ಕಾಯಕಲ್ಪ ಒದಗಿಸುವರೇ ಅಧಿಕಾರಿಗಳು…?

ಮೈಸೂರು,ಫೆ1,Tv10 ಕನ್ನಡ

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣಗೊಂಡ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು ಸಂಪೂರ್ಣ ನಿರ್ಲಕ್ಯಕ್ಕೆ ಒಳಗಾಗಿದೆ.ಸ್ವಂತ ಕಟ್ಟಡಗಳನ್ನ ನಿರ್ಲಕ್ಷಿಸಿ ಬಾಡಿಗೆ ಕಟ್ಟಡಗಳನ್ನ ಆಶ್ರಯಿಸಿರುವ ಅಧಿಕಾರಿಗಳ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ

ಆಕಾಶವಾಣಿ ಕಚೇರಿ ಬಳಿಯ ಚೆಲುವಾಂಬ ಪಾರ್ಕ್ ಮುಂಭಾಗ ಇರುವ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳ ಸ್ಥಿತಿ ಶೋಚನೀಯವಾಗಿದೆ.ಇಲ್ಲಿ ಮೂರು ಕಟ್ಟಡಗಳಿದೆ.ಎಲ್ಲವನ್ನೂ ನಿರ್ಲಕ್ಷಿಸಲಾಗಿದೆ.ತೋಟಗಾರಿಕೆ,ಆಶ್ರಯ ಇಲಾಖೆಗೆ ಸೇರಿದ ಎರಡು ಕಚೇರಿಗಳು ಹಾಗೂ ಖಾಲಿ ಬಿದ್ದಿರುವ ಒಂದು ಕಟ್ಟಡ ಅಧಿಕಾರಿಗಳ ನಿರ್ಲಕ್ಷತೆಗೆ ಮೂಕ ಸಾಕ್ಷಿಯಾಗಿ ನಿಂತಿವೆ.ಶಿಥಿಲಗೊಂಡ ಗೋಡೆಗಳು,ತೆರುವಾಗದ ತೆಂಗಿನ ಗರಿಗಳು,ಕಸದ ರಾಶಿಯಾದ ಆವರಣ,ಬಿರುಕು ಬಿಟ್ಟ ಕಾಂಪೌಂಡ್,ಸೋರಿಕೆಯಾಗುತ್ತಿರುವ ಕುಡಿಯುವ ನೀರು,ಫಾಸ್ಟ್ ಫುಡ್ ವಾಹನಗಳಿಗೆ ಆಶ್ರಯವಾದ ಆವರಣ,ಸೋರಿಕೆಯಾಗುತ್ತಿರುವ ಯುಜಿಡಿ ಪೈಪ್ ಗಳು ಅಧಿಕಾರಿಗಳ ಬೇಜವಾಬ್ದಾರಿತನವನ್ನ ಎತ್ತಿ ಹಿಡಿಯುತ್ತಿದೆ.ಕಚೇರಿಗಳನ್ನ ಸಮರ್ಪಕವಾಗಿ ಬಳಸಿಕೊಳ್ಳದ ಹಿನ್ನಲೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.ಲಕ್ಷಾಂತರ ತೆರಿಗೆ ಹಣ ವೆಚ್ಚ ಮಾಡಿ ನಿರ್ಮಿಸಲಾದ ಕಟ್ಟಡಗಳಿ ಶಿಥಿಲವಾಗುವ ಹಂತ ತಲುಪಿದ್ದರೂ ಕಾಯಕಲ್ಪ ಒದಗಿಸಲು ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಸ್ವಂತ ಕಟ್ಟಡಗಳನ್ನ ನಿರ್ಲಕ್ಷಿಸಿ ಬಾಡಿಗೆ ಕಟ್ಟಡ ಆಶ್ರಯಿಸುವ ಪಾಲಿಕೆ ಅಧಿಕಾರಿಗಳ ಕೆಟ್ಟ ನಿರ್ಧಾರಕ್ಕೆ ಕಡಿವಾಣ ಹಾಕಬೇಕಿದೆ.ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಕಟ್ಟಡಗಳನ್ನ ಯೋಗ್ಯ ರೀತಿಯಲ್ಲಿ ಬಳಕೆ ಮಾಡುವಂತಾಗಬೇಕಿದೆ.ಸಂಪೂರ್ಣ ನಶಿಸಿಹೋಗುವ ಮುನ್ನ ಅಧಿಕಾರಿಗಳು ಎಚ್ಚೆತ್ತು ಕಟ್ಟಡಗಳನ್ನ ಸುಸ್ತಿತಿಗೆ ತಂದು ಬಳಕೆ ಮಾಡುವರೇ…?

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *