ನಿರ್ಲಕ್ಷ್ಯಕ್ಕೆ ಒಳಗಾದ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು…ಕಾಯಕಲ್ಪ ಒದಗಿಸುವರೇ ಅಧಿಕಾರಿಗಳು…?

ನಿರ್ಲಕ್ಷ್ಯಕ್ಕೆ ಒಳಗಾದ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು…ಕಾಯಕಲ್ಪ ಒದಗಿಸುವರೇ ಅಧಿಕಾರಿಗಳು…?

ಮೈಸೂರು,ಫೆ1,Tv10 ಕನ್ನಡ

ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಾಣಗೊಂಡ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳು ಸಂಪೂರ್ಣ ನಿರ್ಲಕ್ಯಕ್ಕೆ ಒಳಗಾಗಿದೆ.ಸ್ವಂತ ಕಟ್ಟಡಗಳನ್ನ ನಿರ್ಲಕ್ಷಿಸಿ ಬಾಡಿಗೆ ಕಟ್ಟಡಗಳನ್ನ ಆಶ್ರಯಿಸಿರುವ ಅಧಿಕಾರಿಗಳ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ಕೇಳಿ ಬರುತ್ತಿವೆ

ಆಕಾಶವಾಣಿ ಕಚೇರಿ ಬಳಿಯ ಚೆಲುವಾಂಬ ಪಾರ್ಕ್ ಮುಂಭಾಗ ಇರುವ ಮೈಸೂರು ಮಹಾನಗರ ಪಾಲಿಕೆ ಕಟ್ಟಡಗಳ ಸ್ಥಿತಿ ಶೋಚನೀಯವಾಗಿದೆ.ಇಲ್ಲಿ ಮೂರು ಕಟ್ಟಡಗಳಿದೆ.ಎಲ್ಲವನ್ನೂ ನಿರ್ಲಕ್ಷಿಸಲಾಗಿದೆ.ತೋಟಗಾರಿಕೆ,ಆಶ್ರಯ ಇಲಾಖೆಗೆ ಸೇರಿದ ಎರಡು ಕಚೇರಿಗಳು ಹಾಗೂ ಖಾಲಿ ಬಿದ್ದಿರುವ ಒಂದು ಕಟ್ಟಡ ಅಧಿಕಾರಿಗಳ ನಿರ್ಲಕ್ಷತೆಗೆ ಮೂಕ ಸಾಕ್ಷಿಯಾಗಿ ನಿಂತಿವೆ.ಶಿಥಿಲಗೊಂಡ ಗೋಡೆಗಳು,ತೆರುವಾಗದ ತೆಂಗಿನ ಗರಿಗಳು,ಕಸದ ರಾಶಿಯಾದ ಆವರಣ,ಬಿರುಕು ಬಿಟ್ಟ ಕಾಂಪೌಂಡ್,ಸೋರಿಕೆಯಾಗುತ್ತಿರುವ ಕುಡಿಯುವ ನೀರು,ಫಾಸ್ಟ್ ಫುಡ್ ವಾಹನಗಳಿಗೆ ಆಶ್ರಯವಾದ ಆವರಣ,ಸೋರಿಕೆಯಾಗುತ್ತಿರುವ ಯುಜಿಡಿ ಪೈಪ್ ಗಳು ಅಧಿಕಾರಿಗಳ ಬೇಜವಾಬ್ದಾರಿತನವನ್ನ ಎತ್ತಿ ಹಿಡಿಯುತ್ತಿದೆ.ಕಚೇರಿಗಳನ್ನ ಸಮರ್ಪಕವಾಗಿ ಬಳಸಿಕೊಳ್ಳದ ಹಿನ್ನಲೆ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.ಲಕ್ಷಾಂತರ ತೆರಿಗೆ ಹಣ ವೆಚ್ಚ ಮಾಡಿ ನಿರ್ಮಿಸಲಾದ ಕಟ್ಟಡಗಳಿ ಶಿಥಿಲವಾಗುವ ಹಂತ ತಲುಪಿದ್ದರೂ ಕಾಯಕಲ್ಪ ಒದಗಿಸಲು ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಸ್ವಂತ ಕಟ್ಟಡಗಳನ್ನ ನಿರ್ಲಕ್ಷಿಸಿ ಬಾಡಿಗೆ ಕಟ್ಟಡ ಆಶ್ರಯಿಸುವ ಪಾಲಿಕೆ ಅಧಿಕಾರಿಗಳ ಕೆಟ್ಟ ನಿರ್ಧಾರಕ್ಕೆ ಕಡಿವಾಣ ಹಾಕಬೇಕಿದೆ.ಸಾರ್ವಜನಿಕರ ತೆರಿಗೆ ಹಣದಲ್ಲಿ ನಿರ್ಮಿಸಲಾದ ಕಟ್ಟಡಗಳನ್ನ ಯೋಗ್ಯ ರೀತಿಯಲ್ಲಿ ಬಳಕೆ ಮಾಡುವಂತಾಗಬೇಕಿದೆ.ಸಂಪೂರ್ಣ ನಶಿಸಿಹೋಗುವ ಮುನ್ನ ಅಧಿಕಾರಿಗಳು ಎಚ್ಚೆತ್ತು ಕಟ್ಟಡಗಳನ್ನ ಸುಸ್ತಿತಿಗೆ ತಂದು ಬಳಕೆ ಮಾಡುವರೇ…?

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *