ಸಾಲಗಾರರ ಹಾವಳಿಗೆ ಹೆದರಿ ನಾಪತ್ತೆಯಾದ ಕುಟುಂಬ ಸೇಫ್…ಸುರಕ್ಷಿತವಾಗಿ ಹಿಂದಿರುಗಿದ ಫ್ಯಾಮಿಲಿ… ಡೆತ್ ನೋಟ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ 5 ಮಂದಿ…

ಸಾಲಗಾರರ ಹಾವಳಿಗೆ ಹೆದರಿ ನಾಪತ್ತೆಯಾದ ಕುಟುಂಬ ಸೇಫ್…ಸುರಕ್ಷಿತವಾಗಿ ಹಿಂದಿರುಗಿದ ಫ್ಯಾಮಿಲಿ… ಡೆತ್ ನೋಟ್ ವಾಯ್ಸ್ ಮೆಸೇಜ್ ಹಾಕಿ ನಾಪತ್ತೆಯಾಗಿದ್ದ 5 ಮಂದಿ…

ಮೈಸೂರು,ಫೆ4,,Tv10 ಕನ್ನಡ

ಸಾಲಗಾರರ ಕಾಟಕ್ಕೆ ಹೆದರಿ ಇಡೀ ಕುಟುಂಬ ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.ಮಿಸ್ಸಿಂಗ್ ಆದ ಸುದ್ದಿ ಪ್ರಸಾರವಾಗುತ್ತಿದ್ದಂತೆಯೇ ಸಂಪರ್ಕಕ್ಕೆ ದೊರೆತ ಕುಟುಂಬ ಮತ್ತೆ ಮೈಸೂರಿಗೆ ವಾಪಸ್ ಬಂದಿದ್ದಾರೆ.ಸಾಲಗಾರರ ಧಂಕಿ ಹೆದರಿದ್ದ ಕುಟುಂಬ ಇದೀಗ ಸೇಫ್ ಆಗಿ ಹಿಂದಿರುಗಿದೆ.

ಮೈಸೂರು ಕೆ.ಜಿ.ಕೊಪ್ಪಲಿನ ಮಹೇಶ್(35),ಈತನ ಪತ್ನಿ ಭವಾನಿ(28),ಪುತ್ರಿ ಪ್ರೇಕ್ಷಾ(3) ಇವರ ತಂದೆ ಮಹದೇವಪ್ಪ(65) ಹಾಗೂ ತಾಯಿ ಸುಮಿತ್ರ(55) ರವರು ಸಾಲಗಾರರ ಕಾಟಕ್ಕೆ ಬೇಸತ್ತು ಜನವರಿ 20 ರಂದು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು.ಸ್ನೇಹಿತರ ಮೊಬೈಲ್ ಗೆ ವಾಯ್ಸ್ ಮೆಸೇಜ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿ ಇಡೀ ಕುಟುಂಬ ನಾಪತ್ತೆಯಾಗಿತ್ತು.ಈ ಸಂಭಂಧ ಭವಾನಿ ಸಹೋದರ ಜಗದೀಶ್ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದರು.ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿ ಸಂಭಂಧಿಕರು ಆತಂಕ ವ್ಯಕ್ತಪಡಿಸಿದ್ದರು.ಬೆಂಗಳೂರಿನ ಸ್ನೇಹಿತರೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದ ಮಹೇಶ್ ಕುಟುಂಬ ಸುರಕ್ಷಿತವಾಗಿ ಹಿಂದಿರುಗಿದೆ.ಮಹೇಶ್ ಸಂಭಂಧಿಕರು ಹಾಗೂ ಸ್ನೇಹಿತರ ಆತಂಕ ದೂರವಾಗಿದೆ.

ಮಾರ್ಕೆಟಿಂಗ್ ಬಿಸಿನೆಸ್ ನಡೆಸುತ್ತಿದ್ದ ಮಹೇಶ್ ರವರು ವೀರೇಶ್ ಎಂಬುವರ ವ್ಯವಹಾರಕ್ಕೆ ಸಾಥ್ ನೀಡಿದ್ದಾರೆ.ಮಹೇಶ್ ಪರಿಚಯ ಹೇಳಿಕೊಂಡು ವೀರೇಶ್ 30 ರಿಂದ 35 ಲಕ್ಷ ಸಾಲ ಪಡೆದಿದ್ದ.ವ್ಯವಹಾರದಲ್ಲಿ ನಷ್ಟವಾದ ಕಾರಣ ವೀರೇಶ್ ರಾತ್ರೋ ರಾತ್ರಿ ಎಸ್ಕೇಪ್ ಆಗಿದ್ದ.ವೀರೇಶ್ ಗೆ ಸಾಲ ನೀಡಿದ ಮಂದಿ ಮಹೇಶ್ ಮೇಲೆ ಒತ್ತಡ ಹೇರಿದ್ದರು.ಪ್ರಾರಂಭದಲ್ಲಿ 2 ಲಕ್ಷಕ್ಕೆ ಗ್ಯಾರೆಂಟಿ ಕೊಟ್ಟ ಮಹೇಶ್ ನಂತರ ಚಕ್ರವ್ಯೂಹದಲ್ಲಿ ಸಿಲುಕಿದ್ದರು.ಸಾಲಗಾರರ ನಿರಂತರ ಒತ್ತಡಕ್ಕೆ ಹೆದರಿದ ಮಹೇಶ್ ತಮ್ಮ ಸ್ನೇಹಿತರಾದ ದರ್ಶನ್ ಎಂಬುವರ ಮೊಬೈಲ್ ಗೆ ವಾಯ್ಸ್ ಮೆಸೇಜ್ ಮಾಡಿದ್ದಾರೆ. ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದೆ.ಸಾಲಗಾರರು ನನಗೆ ತೊಂದರೆ ಕೊಡುತ್ತಿದ್ದಾರೆ.ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.ಸಾಲಗಾರರು ರಾಕ್ಷಸರಂತೆ ವರ್ತಿಸುತ್ತಿದ್ದಾರೆ.ನಾವು ಕೆರೆ ಅಥವಾ ಭಾವಿಗೆ ಬೀಳುತ್ತೇವೆ.ಒಂದು ವೇಳೆ ಮೃತದೇಹ ದೊರೆತರೆ ಅಂತ್ಯಕ್ರಿಯೆ ಮಾಡಿ.ಅವರನ್ನಂತೂ ಬಿಡಬೇಡಿ ಎಂದು ರಂಜಿತಾ,ದಿನೇಶ್,ಚಂದ್ರು ಹಾಗೂ ನೇತ್ರ ಎಂಬುವರ ಹೆಸರನ್ನ ವಾಯ್ಸ್ ಮೆಸೇಜ್ ನಲ್ಲಿ ಉಲ್ಲೇಖಿಸಿ ನಾಪತ್ತೆಯಾಗಿದ್ದರು. ಜನವರಿ 20 ರಂದು ಕಾಣೆಯಾದ ಕುಟುಂಬ ಸುರಕ್ಷಿತವಾಗಿ ಹಿಂದಿರುಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *