ಗಂಡನ ಅಕ್ರಮ ಸಂಭಂಧ ವಿಡಿಯೋ ತೆಗೆಯಲು ಯತ್ನಿಸಿದ ಪತ್ನಿ…ಕಾರಿನಿಂದ ಢಿಕ್ಕಿ ಹೊಡೆದು ಪ್ರಿಯಕರಳ ಜೊತೆ ಎಸ್ಕೇಪ್ ಆದ ಪತಿ…

ಗಂಡನ ಅಕ್ರಮ ಸಂಭಂಧ ವಿಡಿಯೋ ತೆಗೆಯಲು ಯತ್ನಿಸಿದ ಪತ್ನಿ…ಕಾರಿನಿಂದ ಢಿಕ್ಕಿ ಹೊಡೆದು ಪ್ರಿಯಕರಳ ಜೊತೆ ಎಸ್ಕೇಪ್ ಆದ ಪತಿ…

ಮೈಸೂರು,ಫೆ4,Tv10 ಕನ್ನಡ

ಪರಸ್ರ್ತೀಯೊಂದಿಗೆ ಅಕ್ರಮ ಸಂಭಂಧ ಇರಿಸಿಕೊಂಡ ಪತಿಯ ವಿಡಿಯೋ ತೆಗೆಯಲು ಹೋದ ಪತ್ನಿ ಮೇಲೆ ಕಾರಿನಿಂದ ಢಿಕ್ಕಿ ಹೊಡೆದು ಗಾಯಗೊಳಿಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪತಿ ಹಾಗೂ ಪ್ರಿಯಕರಳ ಮೇಲೆ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕೆಸಿ ಲೇಔಟ್ ನಿವಾಸಿಯಾದ ಪತ್ನಿ ವಿಜಯನಗರದ ಸುದೀಪ್ ಎಂಬುವರನ್ನ ವಿವಾಹವಾಗಿದ್ದಾರೆ.ಕಳೆದ ಮೂರು ವರ್ಷಗಳಿಂದ ಸುದೀಪ್ ಪರಸ್ತ್ರೀಯೊಂದಿಗೆ ಅಕ್ರಮ ಸಂಭಂಧ ಬೆಳೆಸಿದ್ದಾರೆ.ಈ ಕುರಿತಂತೆ ಪತ್ನಿ ಸುದೀಪ್ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ಹಾಗೂ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಹೀಗಿದ್ದೂ ಇಬ್ಬರ ಅಕ್ರಮ ಸಂಭಂಧ ಮುಂದುವರೆದಿದೆ.ವಿಜಯನಗರ 3 ನೇ ಹಂತದ ಮನೆಯೊಂದರಲ್ಲಿ ಪತಿ ಸುದೀಪ್ ತನ್ನ ಪ್ರಿಯಕರಳೊಂದಿಗೆ ಇದ್ದಾರೆಂಬ ಮಾಹಿತಿ ಅರಿತ ಪತ್ನಿ ಸ್ಥಳಕ್ಕೆ ಧಾವಿಸಿದ್ದಾರೆ.ಅಕ್ರಮ ಜೋಡಿಗಳು ಕಾರಿನಲ್ಲಿ ಕುಳಿತಿರುವ ದೃಶ್ಯ ಪತ್ನಿಗೆ ಕಂಡು ಬಂದಿದೆ.ಕೂಡಲೇ ವಿಡಿಯೋ ತೆಗೆಯಲು ಪತ್ನಿ ಮುಂದಾಗಿದ್ದಾರೆ.ಈ ವೇಳೆ ಸುದೀಪ್ ಕಾರಿನಿಂದ ಪತ್ನಿಗೆ ಢಿಕ್ಕಿ ಹೊಡೆದು ಗಾಯಗೊಳಿಸಿ ಜಾತಿ ನಿಂದನೆ ಮಾಡಿ ಪ್ರಿಯಕರಳ ಜೊತೆ ಎಸ್ಕೇಪ್ ಆಗಿದ್ದಾರೆ.ಗಾಯಗೊಂಡ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಭಂಧ ಗಾಯಗೊಂಡ ಪತ್ನಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಪ್ರಿಯಕರಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *