ಎನ್.ಆರ್.ಪೊಲೀಸರ ಕಾರ್ಯಾಚರಣೆ…ಚಾಲಾಕಿ ಮನೆಗಳ್ಳರ ಬಂಧನ…ನಗದು ಸೇರಿದಂತೆ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಎನ್.ಆರ್.ಪೊಲೀಸರ ಕಾರ್ಯಾಚರಣೆ…ಚಾಲಾಕಿ ಮನೆಗಳ್ಳರ ಬಂಧನ…ನಗದು ಸೇರಿದಂತೆ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಫೆ2,Tv10 ಕನ್ನಡ

ನರಸಿಂಹರಾಜ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಚಾಲಾಕಿ ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಬಂಧಿತರಿಂದ ನಗದು ಸೇರಿದಂತೆ 47.42 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಸೈಯದ್ ಅಯೂಬ್,ಮಹಮದ್ ಮುನ್ನ ಹಾಗೂ ಪ್ರಸಾದ್.ಆ.ಆಸಿಫ್ ಬಂಧಿತರು.ಮತ್ತೋರ್ವ ಆರೋಪಿ ಫಯಾಸ್ ತಲೆ ಮರೆಸಿಕೊಂಡಿದ್ದಾನೆ.ಮೈಸೂರಿನ ಉನ್ನತಿ ನಗರದಲ್ಲಿ ಕಳುವು ಮಾಡಿದ ಚುನ್ನಾಭರಣಗಳನ್ನ ಅರ್ಧ ಬೆಲೆಗೆ ಮಾರಾಟ ಮಾಡಲು ಯತ್ನಿಸಿದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬಂಧಿತರಿಂದ 832 ಗ್ರಾಂ ಒಡವೆಗಳು 37 ಗ್ರಾಂ ಬೆಳ್ಳಿ ಕಾಯಿನ್ ಗಳು ಹಾಗೂ 1,70,000/- ರೂ ನಗದು ವಶಪಡಿಸಿಕೊಳ್ಳಲಾಗಿದೆ.ಮದ್ದೂರು,ಶ್ರೀರಂಗಪಟ್ಟಣ,ಕೆ.ಆರ್.ನಗರ ಹಾಗೂ ಮೈಸೂರು ಗ್ರಾಮಾಂತರ ಠಾಣೆಯ ತಲಾ ಒಂದು ಕಳುವು ಪ್ರಕರಣಗಳು ಪತ್ತೆಯಾದಂತಾಗಿದೆ.

ಸೈಯದ್ ಅಯೂಬ್ ಹಾಗೂ ಮಹಮದ್ ಮುನ್ನಾ ವಿರುದ್ದ ಬೆಳಗಳೂರಿನ ವಿವಿದ ಠಾಣೆಗಳಲ್ಲಿ 20 ಕ್ಕೂ ಹೆಚ್ಚು ಪ್ರಕರಣಗಳಿವೆ,ಅಲ್ಲದೆ ಮೈಸೂರಿನ ಪ್ರಸಾದ್.ಆ.ಆಸಿಫ್ ಮತ್ತು ಫಯಾಜ್ ವಿರುದ್ದ ಮೈಸೂರಿನಲ್ಲಿ ಸಾಕಷ್ಟು ಕಳುವು ಪ್ರಕರಣಗಳಿವೆ.ಈಗಾಗಲೇ ನಾಲ್ವರು ಆರೋಪಿಗಳು ಇತ್ತೀಚಗಷ್ಟೆ ಜೈಲಿನಿಂದ ಬಿಡುಗಡೆ ಆಗಿದ್ದಾರೆ.ಸೈಯದ್ ಅಯೂಬ್ ಡಿ.27 ರಂದು,ಮಹಮದ್ ಮುನ್ನ ನ.29 ರಂದು,ಆಸಿಫ್ ಮತ್ತು ಫಯಾಜ್ ಜ.7 ರಂದು ಬಿಡುಗಡೆ ಆಗಿದ್ದಾರೆ.ಕಳುವು ಪ್ರಕರಣಗಳಲ್ಲಿ ಭಾಗಿ ಆಗಿ ಜೈಲು ವಾಸ ಅನುಭವಿಸಿದ್ದರೂ ಆರೋಪಿಗಳು ತಮ್ಮ ಚಾಳಿ ಮುಂದುವರೆಸಿದ್ದಾರೆ.ಸೈಯದ್ ಅಯೂಬ್ ಹಾಗೂ ಮಹಮದ್ ಮುನ್ನಾ ಒಂದು ತಂಡವಾದ್ರೆ ಪ್ರಸಾದ್ ಮತ್ತು ಫಯಾಸ್ ಮತ್ತೊಂದು ಗ್ಯಾಂಗ್ ಆಗಿದೆ.ಎರಡು ಗ್ಯಾಂಗ್ ಗಳು ಜೈಲಿನಲ್ಲಿ ಒಂದಾಗಿ ಕಳ್ಳತನದ ಸ್ಕೆಚ್ ಹಾಕಿ ಸಕ್ಸಸ್ ಆಗಿದ್ದಾರೆ ಎನ್ನಲಾಗಿದೆ.ಈ ಚಾಲಾಕಿಗಳು ಕೆ.ಆರ್.ನಗರದಲ್ಲಿ ಕಾರನ್ನ ಕಳುವು ಮಾಡಿ ನಂಬರ್ ಪ್ಲೇಟ್ ಬದಲಿಸಿ ನಂತರ ಬಣ್ಣದ ಸ್ಟಿಕ್ಕರ್ ಅಂಟಿಸಿ ಕೃತ್ಯವೆಸಗಿ ನಂತರ ಕಳುವು ಮಾಡಿದ ಕಾರನ್ನ ಅದೇ ಸ್ಥಳದಲ್ಲಿ ಬಿಟ್ಟುಬಂದಿದ್ದಾರೆ.ಮಂಡ್ಯಾದಲ್ಲಿ ವೈದ್ಯರ ಮನೆಯಲ್ಲಿ ಕೃತ್ಯವೆಸಗಿದ್ದಾರೆ.ಅಚ್ಚರಿಯ ಸಂಗತಿ ಎಂದರೆ ವೈದ್ಯರು ವಾಸ ಇರುವ ಮನೆಯ ಕೆಳಭಾಗದಲ್ಲಿ ನ್ಯಾಯಾಧೀಶರೊಬ್ಬರು ವಾಸವಿದ್ದರೂ ಖದೀಮರು ತಮ್ಮ ಕೈಚಳಕ ತೋರಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾಧ ಮತ್ತು ಸಂಚಾರಿ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಎಸಿಪಿ ಅಶ್ವತ್ಥನಾರಾಯಣ್ ಉಸ್ತುವಾರಿಯಲ್ಲಿ ಎನ್.ಆರ್.ಠಾಣೆಯ ಇನ್ಸ್ಪೆಕ್ಟರ್ ಲಕ್ಷ್ಮೀಕಾಂತ ತಳವಾರ್ ನೇತೃತ್ವದಲ್ಲಿ ಪಿಎಸ್ಸೈ ಗಣೇಶ್ ಸಿಬ್ಬಂದಿಗಳಾದ ಆದಂ,ಮೋಹನ್ ಕುಮಾರ್,ಸುನಿಲ್ ಕುಮಾರ್,ದೊಡ್ಡೇಗೌಡ,ಸುರೇಶ್,ಈರೇಶ್,ಬಸವರಾಜ್ ಹಾಗೂ ಪರಶುರಾಮ್ ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಎನ್.ಆರ್.ಠಾಣೆ ಪೊಲೀಸರ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಪ್ರಶಂಸಿಸಿದ್ದಾರೆ..

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *