ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆ ಹಿರಿಯ ಸಂಶೋಧಕಿಗೆ ಸಹದ್ಯೋಗಿಯಿಂದ ಲೈಂಗಿಕ ಕಿರುಕುಳ…ನಗ್ನ ಚಿತ್ರಗಳನ್ನ ಕಳುಹಿಸಿ ಮಾನಸಿಕ ಹಿಂಸೆ…FIR ದಾಖಲು…

ಮೈಸೂರು,ಫೆ9,Tv10 ಕನ್ನಡ

ಮೈಸೂರಿನ ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆಯಲ್ಲಿ ಹಿರಿಯ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕೋಮಲಾ(ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸಹದ್ಯೋಗಿ ಸಂತೋಷ್ ಕುಮಾರ್ ಮೊಹಂತಿ ಎಂಬುವರು ಮೊಬೈಲ್ ನಲ್ಲಿ ನಿರಂತರವಾಗಿ ತನ್ನ ನಗ್ನ ಚಿತ್ರಗಳನ್ನ ಕಳುಹಿಸುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಮಗಾದ ಕಿರುಕುಳಕ್ಕೆ ಬೇಸತ್ತ ಡಾ.ಕೋಮಲಾ ನ್ಯಾಯಾಲಯದ ಮೊರೆ ಹೋಗಿ ಅನುಮತಿ ಪಡೆದು ಕಿರುಕುಳ ನೀಡುತ್ತಿರುವ ಸಂತೋಷ್ ಕುಮಾರ್ ಮೊಹಂತಿ ಮೇಲೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಫ್.ಐ.ಆರ್.ನಲ್ಲಿ ದಾಖಲಾದ ಅಂಶ..

ಒರಿಸ್ಸಾ ಮೂಲದ ಸಂತೋಷ್ ಕುಮಾರ್ ಮೊಹಂತಿ ರವರು 2019 ರಿಂದಲೂ ಬೆನ್ನು ಬಿದ್ದಿದ್ದು ಲವ್ ಯೂ ಎಂ ಮೆಸೇಜ್ ಗಳನ್ನ ಹಾಕುತ್ತಾ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ಈ ಬಗ್ಗೆ ಡಾ.ಕೋಮಲಾ ರವರು ತಮ್ಮ ಸಹದ್ಯೋಗಿಗಳ ಬಳಿ ಹೇಳಿಕೊಂಡಿದ್ದಾರೆ.ಅಲ್ಲದೆ ಈ ಬಗ್ಗೆ ಹೆಚ್.ಓ.ಡಿ.ರವರ ಗಮನಕ್ಕೂ ತಂದಿದ್ದಾರೆ.ತನಗೆ ಮದುವೆ ಆಗಿದೆ ನಿಮಗೂ ಮದುವೆ ಆಗಿದೆ.ಹೀಗೆ ವರ್ತಿಸಬಾರದೆಂದು ಬುದ್ದಿವಾದ ಹೇಳಿದ್ದಾರೆ.ಹೀಗಿದ್ದರೂ ಸಂತೋಷ್ ಕುಮಾರ್ ಮೊಹಂತಿ ತಮ್ಮ ಚಾಳಿ ಮುಂದುವರೆಸಿದ್ದಾರೆ.10-01-2024 ರಂದು ತನ್ನ ಮೊಬೈಲ್ ನಿಂದ ಡಾ.ಕೋಮಲಾ ಗೆ ನಗ್ನ ಚಿತ್ರಗಳನ್ನ ಕಳಿಸಿದ್ದಾನೆ.ಇದನ್ನ ಡಾ.ಕೋಮಲಾ ಡಿಲೀಟ್ ಮಾಡಿದ್ದಾರೆ.ಫೋಟೋಸ್ ವೀಕ್ಷಣೆ ಮಾಡಿರುವುದನ್ನ ಖಚಿತಪಡಿಸಿಕೊಂಡ ಸಂತೋಷ್ ಕುಮಾರ್ ಮೊಹಂತೆ ಮತ್ತೆ ಮರುದಿನವೇ ತನ್ನ ಗುಪ್ತಾಂಗದ ಫೋಟೋಗಳನ್ನ ಕಳಿಸಿದ್ದಾನೆ.ಕೂಡಲೇ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.ಹಾಗೆ ಮಾಡಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಮೆಸೇಜ್ ಮಾಡಿ ಬೆದರಿಸಿದ್ದಾನೆ.ಇವೆಲ್ಲಾ ಬೆಳವಣಿಗೆಗೆ ಬೇಸತ್ತ ಡಾ.ಕೋಮಲಾ ನ್ಯಾಯಾಲಯದ ಮೊರೆ ಹೋಗಿ ಅನುಮತಿ ಪಡೆದು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಂತೋಷ್ ಕುಮಾರ್ ಮೊಹಂತಿ ವಿರುದ್ದ ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *