ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆ ಹಿರಿಯ ಸಂಶೋಧಕಿಗೆ ಸಹದ್ಯೋಗಿಯಿಂದ ಲೈಂಗಿಕ ಕಿರುಕುಳ…ನಗ್ನ ಚಿತ್ರಗಳನ್ನ ಕಳುಹಿಸಿ ಮಾನಸಿಕ ಹಿಂಸೆ…FIR ದಾಖಲು…

ಮೈಸೂರು,ಫೆ9,Tv10 ಕನ್ನಡ

ಮೈಸೂರಿನ ಕೇಂದ್ರೀಯ ಭಾಷಾ ಸಂಶೋಧನಾ ಸಂಸ್ಥೆಯಲ್ಲಿ ಹಿರಿಯ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಕೋಮಲಾ(ಹೆಸರು ಬದಲಿಸಲಾಗಿದೆ) ಎಂಬುವರಿಗೆ ಸಹದ್ಯೋಗಿ ಸಂತೋಷ್ ಕುಮಾರ್ ಮೊಹಂತಿ ಎಂಬುವರು ಮೊಬೈಲ್ ನಲ್ಲಿ ನಿರಂತರವಾಗಿ ತನ್ನ ನಗ್ನ ಚಿತ್ರಗಳನ್ನ ಕಳುಹಿಸುವ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ತಮಗಾದ ಕಿರುಕುಳಕ್ಕೆ ಬೇಸತ್ತ ಡಾ.ಕೋಮಲಾ ನ್ಯಾಯಾಲಯದ ಮೊರೆ ಹೋಗಿ ಅನುಮತಿ ಪಡೆದು ಕಿರುಕುಳ ನೀಡುತ್ತಿರುವ ಸಂತೋಷ್ ಕುಮಾರ್ ಮೊಹಂತಿ ಮೇಲೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಫ್.ಐ.ಆರ್.ನಲ್ಲಿ ದಾಖಲಾದ ಅಂಶ..

ಒರಿಸ್ಸಾ ಮೂಲದ ಸಂತೋಷ್ ಕುಮಾರ್ ಮೊಹಂತಿ ರವರು 2019 ರಿಂದಲೂ ಬೆನ್ನು ಬಿದ್ದಿದ್ದು ಲವ್ ಯೂ ಎಂ ಮೆಸೇಜ್ ಗಳನ್ನ ಹಾಕುತ್ತಾ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.ಈ ಬಗ್ಗೆ ಡಾ.ಕೋಮಲಾ ರವರು ತಮ್ಮ ಸಹದ್ಯೋಗಿಗಳ ಬಳಿ ಹೇಳಿಕೊಂಡಿದ್ದಾರೆ.ಅಲ್ಲದೆ ಈ ಬಗ್ಗೆ ಹೆಚ್.ಓ.ಡಿ.ರವರ ಗಮನಕ್ಕೂ ತಂದಿದ್ದಾರೆ.ತನಗೆ ಮದುವೆ ಆಗಿದೆ ನಿಮಗೂ ಮದುವೆ ಆಗಿದೆ.ಹೀಗೆ ವರ್ತಿಸಬಾರದೆಂದು ಬುದ್ದಿವಾದ ಹೇಳಿದ್ದಾರೆ.ಹೀಗಿದ್ದರೂ ಸಂತೋಷ್ ಕುಮಾರ್ ಮೊಹಂತಿ ತಮ್ಮ ಚಾಳಿ ಮುಂದುವರೆಸಿದ್ದಾರೆ.10-01-2024 ರಂದು ತನ್ನ ಮೊಬೈಲ್ ನಿಂದ ಡಾ.ಕೋಮಲಾ ಗೆ ನಗ್ನ ಚಿತ್ರಗಳನ್ನ ಕಳಿಸಿದ್ದಾನೆ.ಇದನ್ನ ಡಾ.ಕೋಮಲಾ ಡಿಲೀಟ್ ಮಾಡಿದ್ದಾರೆ.ಫೋಟೋಸ್ ವೀಕ್ಷಣೆ ಮಾಡಿರುವುದನ್ನ ಖಚಿತಪಡಿಸಿಕೊಂಡ ಸಂತೋಷ್ ಕುಮಾರ್ ಮೊಹಂತೆ ಮತ್ತೆ ಮರುದಿನವೇ ತನ್ನ ಗುಪ್ತಾಂಗದ ಫೋಟೋಗಳನ್ನ ಕಳಿಸಿದ್ದಾನೆ.ಕೂಡಲೇ ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.ಹಾಗೆ ಮಾಡಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಮೆಸೇಜ್ ಮಾಡಿ ಬೆದರಿಸಿದ್ದಾನೆ.ಇವೆಲ್ಲಾ ಬೆಳವಣಿಗೆಗೆ ಬೇಸತ್ತ ಡಾ.ಕೋಮಲಾ ನ್ಯಾಯಾಲಯದ ಮೊರೆ ಹೋಗಿ ಅನುಮತಿ ಪಡೆದು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಸಂತೋಷ್ ಕುಮಾರ್ ಮೊಹಂತಿ ವಿರುದ್ದ ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *