SBI ಮುಖ್ಯಶಾಖೆಯಲ್ಲಿ 45 ಲಕ್ಷ ದುರುಪಯೋಗ ಆರೋಪ…ಮೂವರು ಸಿಬ್ಬಂದಿಗಳ ವಿರುದ್ದ FIR ದಾಖಲು…

SBI ಮುಖ್ಯಶಾಖೆಯಲ್ಲಿ 45 ಲಕ್ಷ ದುರುಪಯೋಗ ಆರೋಪ…ಮೂವರು ಸಿಬ್ಬಂದಿಗಳ ವಿರುದ್ದ FIR ದಾಖಲು…

ಮೈಸೂರು,ಫೆ11,Tv10 ಕನ್ನಡ

SBI ಮುಖ್ಯ ಶಾಖೆಯಲ್ಲಿ ಮೂವರು ಸಿಬ್ಬಂದಿಗಳು 45,48,052/- ರೂಗಳನ್ನ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾರೆಂದು ಮುಖ್ಯ ವ್ಯವಸ್ಥಾಪಕರು ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬ್ಯಾಂಕಿನ ಸಿಬ್ಬಂದಿಗಳಾದ ರಾಕೇಶ್,ಪ್ರವೀಣ್ ಹಾಗೂ ಭಾಮಿನಿ ಕಂಚಿಗಾರ ಎಂಬ ಮೂವರು ಸಿಬ್ಬಂದಿಗಳ ವಿರುದ್ದ ವ್ಯವಸ್ಥಾಪಕರಾದ ಆರ್.ಡಿ.ಸುಂದರೇಶ್ ಪ್ರಕರಣ ದಾಖಲಿಸಿದ್ದಾರೆ.

ಬ್ಯಾಂಕ್ ನ ಸ್ವಾಧೀನದಲ್ಲಿದ್ದ 45,48,052/- ರೂಗಳ ನಾಲ್ಕು ಡಿಡಿ ಗಳನ್ನ ರದ್ದುಪಡಿಸಿ ಬ್ಯಾಂಕ್ ನ ಪಾರ್ಕಿಂಗ್ ಖಾತೆಗೆ ವರ್ಗಾವಣೆ ಮಾಡಿ ನಂತದ ಸದರಿ ಹಣವನ್ನ ಗ್ರಾಹಕರಾದ ಕಾವ್ಯ,ಸಾನಿಯಾರಾವ್ ಹಾಗೂ ಪ್ರಭುದೇವ್ ಎಂಬುವರ ಎಸ್.ಬಿ.ಖಾತೆಗೆ ವರ್ಗಾವಣೆ ಮಾಡಿದ್ದಾರೆ.ನಂತರ ಅವರ ಅನುಮತಿ ಇಲ್ಲದೆ ಮೂವರ ಖಾತೆಯಿಂದ 30-03-2022 ರಂದು SBI ಮ್ಯೂಚುಯಲ್ ಫಂಡ್ ಗೆ ಟ್ರಾನ್ಫರ್ ಮಾಡಿದ್ದಾರೆ.ನಂತರ ಇದೇ ಹಣವನ್ನ 07-04-2022 ರಂದು ಮ್ಯೂಚುವೆಲ್ ಫಂಡ್ ನಿಂದ ಹಿಂಪಡೆದು ಗ್ರಾಹಕರ ಖಾತೆಗೆ ವರ್ಗಾವಣೆ ಮಾಡಿ ಮತ್ತೆ ಬ್ಯಾಂಕಿನ ಹೆಸರಿಗೆ ನಾಲ್ಕು ಡಿಡಿಗಳನ್ನ ಮಾಡಿ ಜಮಾ ಮಾಡಿದ್ದಾರೆ.30-03-2022 ರಿಂದ 07-04-2022 ರವರೆಗೆ 45,48,052/- ರೂ ಹಣವನ್ನ ತಾತ್ಕಾಲಿಕವಾಗಿ ದುರುಪಯೋಗಪಡಿಸಿಕೊಂಡು ಬ್ಯಾಂಕಿಗೆ ವಂಚಿಸಿ ಗ್ರಾಹಕರ ಅನುಮತಿ ಇಲ್ಲದೆ ಮ್ಯೂಚುಯಲ್ ಫಂಡ್ ಗೆ ಇನ್ವೆಸ್ಟ್ ಮಾಡಿ ಪ್ರಾದೇಶಿಕ ಕಚೇರಿಗೆ ತಪ್ಪುಮಾಹಿತಿ ನೀಡಿರುವ ಮೂವರು ಸಿಬ್ಬಂದಿಗಳ ವಿರುದ್ದ ಕಾನೂನು ರೀತಿ ಕ್ರಮ ಜರುಗಿಸುವಂತೆ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಮುಖ್ಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *