ವಾಟ್ಸಪ್ ಡೆತ್ ನೋಟ್ ಬರೆದು ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್…ನಾಲ್ಕು ದಿನಗಳ ನಂತರ ವಾಪಸ್…

ವಾಟ್ಸಪ್ ಡೆತ್ ನೋಟ್ ಬರೆದು ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್…ನಾಲ್ಕು ದಿನಗಳ ನಂತರ ವಾಪಸ್…

ಮೈಸೂರು,ಫೆ14,Tv10 ಕನ್ನಡ

ಕಂಪನಿಯ ಚೀಫ್ ಗೆ ವಾಟ್ಸಾಪ್ ಡೆತ್ ನೋಟ್ ಮೆಸೇಜ್ ಹಾಕಿ ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್ ಆಗಿದ್ದು,ನಾಲ್ಕು ದಿನಗಳ ನಂತರ ಹಿಂದಿರುಗಿದ ಘಟನೆ ಬೆಳಕಿಗೆ ಬಂದಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರ್ ಬ್ಲಾಕ್ ನಲ್ಲಿ ಘಟನೆ ನಡೆದಿದೆ.ಸೈಯದ್ ಮೊಹಮದ್ ರವರ ಮಗ ಸೈಯದ್ ಶರಣ್(27) ಮಿಸ್ಸಿಂಗ್ ಆಗಿದ್ದ ಮೆಕ್ಯಾನಿಕಲ್ ಇಂಜಿನಿಯರ್ ನಾಲ್ಕು ದಿನಗಳ ನಂತರ ಸೇಫ್ ಆಗಿ ಹಿಂದಿರುಗಿದ್ದಾರೆ.ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಸೈಯದ್ ಶರಣ್ ಫೆ.10 ರಂದು ಮೈಸೂರಿಗೆ ಬಂದಿದ್ದಾರೆ.ಫೆ.11 ರಂದು ಮಟನ್ ತರುವುದಾಗಿ ಮನೆಯಲ್ಲಿ ತಿಳಿಸಿ ಹೊರಟವರು ಮತ್ತೆ ವಾಪಸ್ ಬಂದಿಲ್ಲ.ಸ್ನೇಹಿತರು ಹಾಗೂ ಸಂಭಂಧಿಕರಿಂದ ಯಾವುದೇ ಮಾಹಿತಿ ಸಿಗಲಿಲ್ಲ.ಕೊನೆಗೆ ಕಂಪನಿಯ ಚೀಫ್ ಗೆ ಸೈಯದ್ ಶರಣ್ ವಾಟ್ಸಾಪ್ ಮೆಸೇಜ್ ನಲ್ಲಿ ಸೂಸೈಡ್ ಮೆಸೇಜ್ ಕಳಿಸಿರುವ ಮಾಹಿತಿ ಬಂದಿದೆ.ನಾಳೆಯಿಂದ ಆಫೀಸ್ ಗೆ ಬರುವುದಿಲ್ಲ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ.ಯಾರಿಗೂ ಹೇಳಬೇಡಿ ಎಂದು ಮೆಸೇಜ್ ಮಾಡಿ ನಾಪತ್ತೆಯಾಗಿದ್ದಾರೆ.ಈ ಸಂಭಂಧ ತಂದೆ ಸೈಯದ್ ಮೊಹಮದ್ ಮಂಡಿ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದಾರೆ.ಫೆ.14 ರಂದು ಬೆಳಗಾಂ ನಲ್ಲಿ ಸೈಯದ್ ಶರಣ್ ಪತ್ತೆಯಾಗಿದ್ದಾರೆ.ಮೈಸೂರಿಗೆ ತಲುಪಿರುವ ಸೈಯದ್ ಶರಣ್ ನನ್ನ ಓದಿಗೆ ಸರಿಯಾಗಿ ಕೆಲಸ ಸಿಕ್ಕಿಲ್ಲವೆಂಬ ಕಾರಣ ಬೇಸತ್ತು ಇಂತಹ ನಿರ್ಧಾರ ಕೈಗೊಂಡಿದ್ದರೆಂದು ತಂದೆಗೆ ತಿಳಿಸಿದ್ದಾರೆ.ಸಧ್ಯ ಮಿಸ್ಸಿಂಗ್ ಆಗಿದ್ದ ಸೈಯದ್ ಶರಣ್ ಸೇಫ್ ಆಗಿ ಮನೆಗೆ ಹಿಂದಿರುಗಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *