ವಾಟ್ಸಪ್ ಡೆತ್ ನೋಟ್ ಬರೆದು ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್…ನಾಲ್ಕು ದಿನಗಳ ನಂತರ ವಾಪಸ್…

ವಾಟ್ಸಪ್ ಡೆತ್ ನೋಟ್ ಬರೆದು ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್…ನಾಲ್ಕು ದಿನಗಳ ನಂತರ ವಾಪಸ್…

ಮೈಸೂರು,ಫೆ14,Tv10 ಕನ್ನಡ

ಕಂಪನಿಯ ಚೀಫ್ ಗೆ ವಾಟ್ಸಾಪ್ ಡೆತ್ ನೋಟ್ ಮೆಸೇಜ್ ಹಾಕಿ ಮೆಕ್ಯಾನಿಕಲ್ ಇಂಜಿನಿಯರ್ ಮಿಸ್ಸಿಂಗ್ ಆಗಿದ್ದು,ನಾಲ್ಕು ದಿನಗಳ ನಂತರ ಹಿಂದಿರುಗಿದ ಘಟನೆ ಬೆಳಕಿಗೆ ಬಂದಿದೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇದರ್ ಬ್ಲಾಕ್ ನಲ್ಲಿ ಘಟನೆ ನಡೆದಿದೆ.ಸೈಯದ್ ಮೊಹಮದ್ ರವರ ಮಗ ಸೈಯದ್ ಶರಣ್(27) ಮಿಸ್ಸಿಂಗ್ ಆಗಿದ್ದ ಮೆಕ್ಯಾನಿಕಲ್ ಇಂಜಿನಿಯರ್ ನಾಲ್ಕು ದಿನಗಳ ನಂತರ ಸೇಫ್ ಆಗಿ ಹಿಂದಿರುಗಿದ್ದಾರೆ.ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಡಿಸೈನ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ಸೈಯದ್ ಶರಣ್ ಫೆ.10 ರಂದು ಮೈಸೂರಿಗೆ ಬಂದಿದ್ದಾರೆ.ಫೆ.11 ರಂದು ಮಟನ್ ತರುವುದಾಗಿ ಮನೆಯಲ್ಲಿ ತಿಳಿಸಿ ಹೊರಟವರು ಮತ್ತೆ ವಾಪಸ್ ಬಂದಿಲ್ಲ.ಸ್ನೇಹಿತರು ಹಾಗೂ ಸಂಭಂಧಿಕರಿಂದ ಯಾವುದೇ ಮಾಹಿತಿ ಸಿಗಲಿಲ್ಲ.ಕೊನೆಗೆ ಕಂಪನಿಯ ಚೀಫ್ ಗೆ ಸೈಯದ್ ಶರಣ್ ವಾಟ್ಸಾಪ್ ಮೆಸೇಜ್ ನಲ್ಲಿ ಸೂಸೈಡ್ ಮೆಸೇಜ್ ಕಳಿಸಿರುವ ಮಾಹಿತಿ ಬಂದಿದೆ.ನಾಳೆಯಿಂದ ಆಫೀಸ್ ಗೆ ಬರುವುದಿಲ್ಲ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ.ಯಾರಿಗೂ ಹೇಳಬೇಡಿ ಎಂದು ಮೆಸೇಜ್ ಮಾಡಿ ನಾಪತ್ತೆಯಾಗಿದ್ದಾರೆ.ಈ ಸಂಭಂಧ ತಂದೆ ಸೈಯದ್ ಮೊಹಮದ್ ಮಂಡಿ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದಾರೆ.ಫೆ.14 ರಂದು ಬೆಳಗಾಂ ನಲ್ಲಿ ಸೈಯದ್ ಶರಣ್ ಪತ್ತೆಯಾಗಿದ್ದಾರೆ.ಮೈಸೂರಿಗೆ ತಲುಪಿರುವ ಸೈಯದ್ ಶರಣ್ ನನ್ನ ಓದಿಗೆ ಸರಿಯಾಗಿ ಕೆಲಸ ಸಿಕ್ಕಿಲ್ಲವೆಂಬ ಕಾರಣ ಬೇಸತ್ತು ಇಂತಹ ನಿರ್ಧಾರ ಕೈಗೊಂಡಿದ್ದರೆಂದು ತಂದೆಗೆ ತಿಳಿಸಿದ್ದಾರೆ.ಸಧ್ಯ ಮಿಸ್ಸಿಂಗ್ ಆಗಿದ್ದ ಸೈಯದ್ ಶರಣ್ ಸೇಫ್ ಆಗಿ ಮನೆಗೆ ಹಿಂದಿರುಗಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *