ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.
ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.
ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದೆ.
ನವೀನ್ ರವರ ಪಾರ್ಥಿವ ಶರೀರವನ್ನ ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದೆ.ವಿಚಾರ ತಿಳಿದ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು,ಇ.ಒ. ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *