ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ಅಸ್ಸಾಂ ಗಡಿಯಲ್ಲಿ ನಂಜನಗೂಡು ಯೋಧ ಹೃದಯಾಘಾತದಿಂದ ಸಾವು…

ನಂಜನಗೂಡು,ಫೆ17,Tv10 ಕನ್ನಡ

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ನಂಜನಗೂಡು ತಾಲೂಕು ಹುಲ್ಲಹಳ್ಳಿಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಅಸ್ಸಾಂ ರಾಜ್ಯದ ತಿರಪೂರಿನಲ್ಲಿ ನಡೆದಿದೆ.
ನವೀನ್(42) ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ನಿವೃತ್ತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೆಂಕಟರಾಮು ಎಂಬುವರರ ಪುತ್ರ ವಿ.ನವೀನ್.
ಬಿ ಎಸ್ ಎಫ್ ಇಂಡಿಯನ್ ಸೈನ್ಯದಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧ ನವೀನ್ ಅವರ ಸಾವಿನ ಸುದ್ದಿ ತಲುಪುತ್ತಿದ್ದಂತೆಯೇ ಸ್ನೇಹಿತರು ಮತ್ತು ಬಂಧು-ಬಳಗ ದುಃಖದಲ್ಲಿ ಮುಳುಗಿದೆ.
ನವೀನ್ ರವರ ಪಾರ್ಥಿವ ಶರೀರವನ್ನ ಭಾನುವಾರ ಮಧ್ಯಾಹ್ನ ನಂಜನಗೂಡಿಗೆ ತರಲಾಗುತ್ತಿದೆ. ನಂಜನಗೂಡಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹುಲ್ಲಹಳ್ಳಿ ಗ್ರಾಮದಲ್ಲಿ ಮೌನ ಆವರಿಸಿದೆ.ವಿಚಾರ ತಿಳಿದ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸನೂರು,ಇ.ಒ. ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಆತ್ಮಸ್ಥೈರ್ಯ ತುಂಬಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *