ಸರ್ಕಾರಿ ದಾಖಲೆಗಳನ್ನ ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ FIR ದಾಖಲು…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ಕ್ರಮ…

ನಂಜನಗೂಡು,ಫೆ18,Tv10 ಕನ್ನಡ

ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ FIR ದಾಖಲಿಸಿದ್ದಾರೆ.

ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ3.16 ಬಿ.ಬಸ್ಸಪ್ಪ ಎಂಬುವರಿಗೆ ಸೇರಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ.ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ.ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು.ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ.ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿದ ಅಸೆಸ್ ಮೆಂಟ್ ಗಳಲ್ಲಿ ವಿವಿದ ಅಳತೆಗಳನ್ನ ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.ಇವೆಲ್ಲಾ ಪ್ರಕ್ರಿಯೆಗಳನ್ನ ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನ ಖಾಲಿ ಬಿಡಲಾಗಿದೆ.ಕೆಲವೆಡೆ ತಿದ್ದಿ ಬರೆದಿದ್ದಾರೆ.ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿದೆ.ಈ ಹಿನ್ನಲೆ ಜಿಲ್ಲಾಧಿಕಾರಿಗಳ ಆದೇಶದಂತೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ದ ಹಾಲಿ ಪೌರಾಯುಕ್ತರಾದ ನಂಜುಂಡಸ್ವಾಮಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *