ಸರ್ಕಾರಿ ದಾಖಲೆಗಳನ್ನ ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ FIR ದಾಖಲು…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ಕ್ರಮ…

ನಂಜನಗೂಡು,ಫೆ18,Tv10 ಕನ್ನಡ

ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ FIR ದಾಖಲಿಸಿದ್ದಾರೆ.

ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ3.16 ಬಿ.ಬಸ್ಸಪ್ಪ ಎಂಬುವರಿಗೆ ಸೇರಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ.ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ.ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು.ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ.ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿದ ಅಸೆಸ್ ಮೆಂಟ್ ಗಳಲ್ಲಿ ವಿವಿದ ಅಳತೆಗಳನ್ನ ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.ಇವೆಲ್ಲಾ ಪ್ರಕ್ರಿಯೆಗಳನ್ನ ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನ ಖಾಲಿ ಬಿಡಲಾಗಿದೆ.ಕೆಲವೆಡೆ ತಿದ್ದಿ ಬರೆದಿದ್ದಾರೆ.ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿದೆ.ಈ ಹಿನ್ನಲೆ ಜಿಲ್ಲಾಧಿಕಾರಿಗಳ ಆದೇಶದಂತೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ದ ಹಾಲಿ ಪೌರಾಯುಕ್ತರಾದ ನಂಜುಂಡಸ್ವಾಮಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *