ಸರ್ಕಾರಿ ದಾಖಲೆಗಳನ್ನ ತಿದ್ದಿ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ FIR ದಾಖಲು…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ಕ್ರಮ…

ನಂಜನಗೂಡು,ಫೆ18,Tv10 ಕನ್ನಡ

ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ FIR ದಾಖಲಿಸಿದ್ದಾರೆ.

ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ 58,59 ರ ವಿಸ್ತೀರ್ಣ3.16 ಬಿ.ಬಸ್ಸಪ್ಪ ಎಂಬುವರಿಗೆ ಸೇರಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ.ನಂತರ ವಸತಿ ಬಡಾವಣೆ ನಿರ್ಮಿಸಲು ಬದಲಾವಣೆ ಸಹ ಆದೇಶ ಮಾಡಿದ್ದಾರೆ.ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು.ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಅನುಮೋದನೆ ಆಗಿಲ್ಲ.ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106 ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1 ರಿಂದ 48 ರವರೆಗೆ ವಿವಿದ ಅಸೆಸ್ ಮೆಂಟ್ ಗಳಲ್ಲಿ ವಿವಿದ ಅಳತೆಗಳನ್ನ ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.ಇವೆಲ್ಲಾ ಪ್ರಕ್ರಿಯೆಗಳನ್ನ ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನ ಖಾಲಿ ಬಿಡಲಾಗಿದೆ.ಕೆಲವೆಡೆ ತಿದ್ದಿ ಬರೆದಿದ್ದಾರೆ.ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿದೆ.ಈ ಹಿನ್ನಲೆ ಜಿಲ್ಲಾಧಿಕಾರಿಗಳ ಆದೇಶದಂತೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ದ ಹಾಲಿ ಪೌರಾಯುಕ್ತರಾದ ನಂಜುಂಡಸ್ವಾಮಿ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ..

Spread the love

Related post

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್…ಸಿಎಂ,ಡಿಸಿಎಂ ರಿಂದ ಲಾಂಚ್…

SLOUCH HAT ಗೆ ಬೈ ಬೈ…PEAK CAP ಗೆ ಹಾಯ್ ಹಾಯ್…ಇಂದಿನಿಂದ…

ಬೆಂಗಳೂರು,ಅ28,Tv10 ಕನ್ನಡ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಹಾಗೂ ಮುಖ್ಯಪೇದೆಗಳಿಗೆ ಹೊಸ ಕ್ಯಾಪ್ ಧರಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.ನೂತನವಾಗಿ ಆಕರ್ಷಕವಾಗಿ ಸಿದ್ದಪಡಿಸಲಾದ PEAK CAP ಗೆ ಬೆಂಗಳೂರಿನ…
ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ…ಆಯುರ್ವೇದ ಗಿಡಗಳನ್ನ ವಿತರಿಸಿ ಆಚರಣೆ… ಮೈಸೂರು,ಅ28,Tv10 ಕನ್ನಡ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಇಂದು ಅಪೂರ್ವ ಸ್ನೇಹಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.ಚಾಮುಂಡಿಪುರಂ ನಿವಾಸಿಗಳಿಗೆ ಹಾಗೂ ಸಾರ್ವಜನಿಕರಿಗೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು… ಮೈಸೂರು,ಅ27,Tv10 ಕನ್ನಡ ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ…

Leave a Reply

Your email address will not be published. Required fields are marked *