ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *