ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *