ಸಾಲದ ಹಣಕ್ಕೆ ಟಾರ್ಚರ್…ಗೃಹಿಣಿ ಹ್ಯಾಂಗ್…ಮೂವರು ಅಂದರ್…

ಮೈಸೂರು,ಫೆ22,Tv10 ಕನ್ನಡ

ಸಾಲದ ಹಿಂದಿರುಗಿಸುವಂತೆ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತ ಗೃಹಿಣಿ ನೇಣುಬಿಗಿದು ಆತ್ಮಹತ್ಯೆ ಶರಣಾದ ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶಹನಾ ಶರೀನ್ (25) ಮೃತ ಗೃಹಿಣಿ.ಹಣಕ್ಕಾಗಿ ಪೀಡಿಸಿದ ಸಂಘ ಸಂಸ್ಥೆಯೊಂದ ಪ್ರಮುಖರಾದ ಫರ್ಜಾನಾ,ನಾಜಿಯಾ ಹಾಗೂ ಮುಬಾರಕ್ ರನ್ನ ಮಂಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಶೋಕಾ ರಸ್ತೆ ನಿಜಾಮಿಯಾ ಸ್ಕೂಲ್ ಹಿಂಬಾಗದ ಮನೆಯೊಂದರಲ್ಲಿ ವಾಸವಿದ್ದ ಶಹನಾ ಶಿರೀನ್ ಮೂರು ಸಂಘ ಸಂಸ್ಥೆಯೊಂದರಲ್ಲಿ ಸದಸ್ಯರಾಗಿದ್ದರು.ಪತಿಗೆ ಗೂಡ್ಸ್ ವಾಹನ ಕೊಡಿಸುವ ಸಲುವಾಗಿ ಮೂರು ಸಂಘಗಳಿಂದ ತಲಾ 50 ಸಾವಿರದಂತೆ 1,50,000/- ಸಾಲ ಪಡೆದಿದ್ದರು.ಮೂರು ತಿಂಗಳ ಹಿಂದೆ ಪಡೆದ ಸಾಲಕ್ಕೆ ಆಗಲೇ 50 ಸಾವಿರ ಬಡ್ಡಿ ಕಟ್ಟಿದ್ದರು.ಹೀಗಿದ್ದೂ ಸಾಲದ ಹಣ ಹಿಂದಿರುಗಿಸುವಂತೆ ಫರ್ಜಾನಾ,ನಾಜಿಯಾ,ಮುಬಾರಕ್ ರವರು ಕಿರುಕುಳ ನೀಡುತ್ತಿದ್ದರು.ಎರಡು ದಿನಗಳ ಹಿಂದೆ ಮನೆಗೆ ಬಂದು ಶಹನಾ ಶಿರೀನ್ ಬಳಿ ಇದ್ದ ಮೊಬೈಲ್ ಸಹ ಕಿತ್ತುಕೊಂಡು ಹೋಗಿದ್ದರು.ಹೀಗಿದ್ದೂ ನಿರಂತರವಾಗಿ ಅಸಲು ಹಾಗೂ ಬಡ್ಡಿಗಾಗಿ ಟಾರ್ಚರ್ ನೀಡುತ್ತಿದ್ದರು.ಇದರಿಂದ ಬೇಸತ್ತ ಶಹನಾ ಶಿರೀನ್ ಪತಿ ಅಯೂಬ್ ಖಾನ್ ಗೆ ಫೋನ್ ಮಾಡಿ ಬೇಗ ಮನೆಗೆ ಬರುವಂತೆ ತಿಳಿಸಿದ್ದಾರೆ.ಪತಿ ಅಯೂಬ್ ಖಾನ್ ಮನೆಗೆ ತಲುಪುವಷ್ಟರಲ್ಲಿ ಶಹನಾ ಶಿರೀನ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಪತ್ನಿಯ ಸಾವಿಗೆ ಮೂವರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಪತಿ ಅಯೂಬ್ ಖಾನ್ ಕಾನೂನು ಕ್ರಮ ಜರುಗಿಸುವಂತೆ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಸಾಲಕ್ಕಾಗಿ ಕಿರುಕುಳ ನೀಡಿದ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *