ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *