ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *