ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *