ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ…40 ಕ್ಕೂ ಹೆಚ್ಚು ಮಂದಿಗೆ ವಿತರಣೆ…

ಮೈಸೂರು,ಫೆ23,Tv10 ಕನ್ನಡ

ಇಂದು ಮೈಸೂರು ವಲಯ ಕಚೇರಿ 1 ಮತ್ತು 2 ರಲ್ಲಿ ಪೌರಕಾರ್ಮಿಕರಿಗೆ ಉಚಿತವಾಗಿ ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಕೊಡಲಾಯಿತು.ಕರ್ನಾಟಕ ಒನ್ ಮೈಸೂರು ಜಿಲ್ಲೆ ಸಂಯೋಜಕರಾದ ಮೋಹನ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇದೇ ವೇಳೆ ಪೌರಕಾರ್ಮಿಕರಿಗರ
ಆಯುಷ್ಮನ್ ಕಾರ್ಡ ನ ಪ್ರಯೋಜನಗಳನ್ನ ತಿಳಿಸಿಕೊಡಲಾಯಿತು.40 ಕ್ಕೂ ಹೆಚ್ಚು ಪೌರ ಕಾರ್ಮಿಕರು ಕಾರ್ಡ್ ಪಡೆದುಕೊಂಡರು.ಹಾಗೂ ಕಾರ್ಡ್ ನ ಮಹತ್ವವನ್ನ ತಿಳಿಸಿಕೊಡಲಾಯಿತು.

ಆಯುಷ್ಮಾನ್ ಕಾರ್ಡ್ ನ ಪ್ರಯೋಜನಗಳು..

1 ಈ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನು ಮಾಡಿಸಿಕೊಳ್ಳುವುದರಿಂದ ರಾಜ್ಯದಲ್ಲಿರುವ ನೋಂದಾಯಿತ ಆಸ್ಪತ್ರೆಗಳಲ್ಲಿ ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 5 ಲಕ್ಷದವರೆಗೆ ಹಾಗು ಎ ಪಿ ಎಲ್ ಕಾರ್ಡ್ ಹೊಂದಿರುವವರಿಗೆ 1 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ.
2 ದೇಶಾದ್ಯಂತ ನೋಂದಾಯಿತ ಆಸ್ಪತ್ರೆಗಳಲ್ಲಿ ಯಾವುದೇ ಶುಲ್ಕವನ್ನು ಈ ಯೋಜನೆಯಡಿಯಲ್ಲಿ ನೀಡುವಂತಿಲ್ಲ.
3 ಈ ಯೋಜನೆಯನ್ನು ಗ್ರಾಮೀಣ ಪ್ರದೇಶದವರು ಗ್ರಾಮ ಒನ್ ನಲ್ಲಿ ಮತ್ತು ನಗರ ಪ್ರದೇಶದವರು ಕರ್ನಾಟಕ ಒನ್ ನಲ್ಲಿ ಉಚಿತವಾಗಿ ಕಾರ್ಡ್ ಅನ್ನು ಮಾಡಿಸಿಕೊಳ್ಳಬಹುದು.

ಅಯುಷ್ಮಾನ್ ಭಾರತ್ ಪ್ರದಾನ ಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಅರೋಗ್ಯ ಕರ್ನಾಟಕ ಕಾರ್ಡ್ ಅನ್ನು ಮಾಡಿಸಿಕೊಳ್ಳಲು ಬೇಕಾಗಿರುವ ದಾಖಲಾತಿಗಳು.

1 ಆಧಾರ್ ಕಾರ್ಡ್
2 BPL / APL ರೇಷನ್ ಕಾರ್ಡ್
3 ಆಧಾರ್ ಗೆ ಲಿಂಕ್ ಹಾಗಿರುವ ಮೊಬೈಲ್ ನಂಬರ್
4 ಅರ್ಜಿದಾರರೇ ನೇರವಾಗಿ ಬಂದು ಹೆಲ್ತ್ ಕಾರ್ಡ್ ಮಾಡಿಸಿಕೊಳ್ಳಬೇಕು

ಈ ಕಾರ್ಯಕ್ರಮವನ್ನು ಮೈಸೂರು ಸಿಟಿ ಕಾರ್ಪೋರೇಶನ್ ಮತ್ತು ಹೆಲ್ತ್ ಡಿಪಾರ್ಟ್ಮೆಂಟ್ ಹಾಗೂ ಕರ್ನಾಟಕ ಒನ್ ಸಹಯೋಗದಲ್ಲಿ ಇಂದು ಉಚಿತ ಹೆಲ್ತ್ ಕಾರ್ಡ್ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ

ಡಾ. ಬೃಂದಾ
ಜಿಲ್ಲಾ ನೋಡಲ್ ಅಧಿಕಾರಿಗಳು, ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ.

ಹೆಲ್ತ್ ಡಿಪಾರ್ಟ್ಮೆಂಟ್ ನ ನಾಗೇಶ್ ಹಾಗೂ ಕರ್ನಾಟಕ ಒನ್ ಆಪರೇಟರ್ ತೇಜಸ್ವಿನಿ ಎ ಜಿ ಮತ್ತು ರಾಕೇಶ್ ಎಸ್ ರವರು ಉಪಸ್ಥಿತರಿದ್ದರು…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *