ಸಿಸಿಬಿ ಪೊಲೀಸರ ಕಾರ್ಯಾಚರಣೆ…ಮಾರಕಾಸ್ತ್ರಗಳ ಸಮೇತ ರೌಡಿ ಶೀಟರ್ ಅಂದರ್…ಮೂರು ಡ್ರಾಗರ್ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ

ರೌಡಿಶೀಟರ್ ಗಳ ಹುಟ್ಟಡಗಿಸಲು ಮೈಸೂರು ಸಿಸಿಬಿ ಪೊಲೀಸ್ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದೆ.ರೌಡಿಶೀಟರ್ ಗಳ ಚಲನವಲನಗಳ ಮೇಲೆ ನಿಗಾ ಇಡುತ್ತಿರುವ ಪೊಲೀಸರು ಸ್ವಲ್ಪ ಡೌಟ್ ಬಂದ್ರೂ ರೌಂಡ್ ಅಪ್ ಮಾಡುತ್ತಿದ್ದಾರೆ.ರೌಡಿಗಳ ಆಕ್ಟಿವಿಟಿಗಳ ಮೇಲೆ ಹದ್ದಿನ ಕಣ್ಣಿಟ್ಟ ಸಿಸಿಬಿ ಪೊಲೀಸರಿಗೆ ತಿಮಿಂಗಿಲವೊಂದು ಬಲೆಗೆ ಬಿದ್ದಿದೆ.ಬೆಂಗಳೂರು ಹಾಗೂ ಮೈಸೂರು ನಗರದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಲಷ್ಕರ್ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಖಾತೆ ತೆಗೆಸಿಕೊಂಡಿರುವ ಜಾವೆದ್ ಖಾನ್@ ಸೈನೆಡ್ ಜಾವೆದ್ (42) ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾನೆ.ಈತನ ಮೇಲೆ ಈಗಾಗಲೇ ಹಲವು ಪ್ರಕರಣಗಳಿದ್ದರೂ ಮತ್ತೊಂದು ಕೃತ್ಯಕ್ಕೆ ಸಂಚು ಹಾಕುತ್ತಿದ್ದ ವೇಳೆ ಸಿಸಿಬಿ ಟೀಂ ಅಟ್ಯಾಕ್ ಮಾಡಿ ವಶಕ್ಕೆ ಪಡೆದಿದೆ.ಸಿಕ್ಕಿಬಿದ್ದ ವೇಳೆ ಜಾವೇದ್ ಖಾನ್ ಬಳಿ ವಿವಿದ ನಮೂನೆಯ ಮೂರು ಡ್ರಾಗರ್ ಗಳ ದೊರೆತಿದೆ.ನಂಬರ್ ಪ್ಲೇಟ್ ಇಲ್ಲದ ಸುಜುಕಿ ಆಕ್ಸಿಸ್ ನಲ್ಲಿ ಡ್ರಾಗರ್ ಗಳನ್ನ ಇಟ್ಟುಕೊಂಡಿದ್ದ ವೇಳೆ ರೆಡ್ ಹ್ಯಾಂಡಾಗಿ ಸಿಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ರೌಡಿಗಳ ಚಲನವಲನಗಳ ಮೇಲೆ ಹದ್ದಿನಕಣ್ಣಿಡುವಂತೆ ಸಿಸಿಬಿ ಪೊಲೀಸರಿಗೆ ಜವಾಬ್ದಾರಿ ನೀಡಲಾಗಿದೆ.ಠಾಣೆಗೆ ಕರೆಸಿ ಎಚ್ಚರಿಕೆ ಕೊಡುವ ಬದಲು ರೌಡಿಶೀಟರ್ ಗಳು ಇರುವ ಸ್ಥಳವನ್ನೇ ಹುಡುಕಿಕೊಂಡು ಹೋಗಿ ಪರಿಶೀಲನೆ ಮಾಡಬೇಕೆಂಬ ಜವಾಬ್ದಾರಿಯನ್ನ ಸಿಸಿಬಿ ಪೊಲೀಸರ ಹೆಗಲಿಗೆ ಹಾಕಲಾಗಿದೆ.ಇದೇ ವಿಚಾರದ ಹಿನ್ನಲೆ ಫೆ.23 ರ ರಾತ್ರಿ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಉನ್ನತಿನಗರದಲ್ಲಿ ಇನ್ಸ್ಪೆಕ್ಟರ್ ಪೂವಯ್ಯ ಮತ್ತು ಟೀಂ ರೌಂಡ್ಸ್ ಮಾಡುತ್ತಿದ್ದ ವೇಳೆ ಜಾವೆದ್ ಖಾನ್ @ ಸೈನೆಡ್ ಜಾವೆದ್ ಮಾರಕಾಸ್ತ್ರಗಳ ಸಮೇತ ಬಿದ್ದಿದ್ದಾನೆ.

2019 ರಲ್ಲಿ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾವೆದ್ ಖಾನ್ ಪಿಸ್ತೂಲ್ ಮಾರಾಟ ಮಾಡುವ ಯತ್ನದಲ್ಲಿ ತಂಡದ ಜೊತೆ ಶಾಮೀಲಾಗಿದ್ದ ವೇಳೆ ಸಿಕ್ಕಿಬಿದ್ದಿದ್ದ.ಬೆಂಗಳೂರು ಸಿಸಿಬಿ ಪೊಲೀಸರು ಜಾವೆದ್ ಖಾನ್ ಸೇರಿದಂತೆ 6 ಮಂದಿಯನ್ನ ಬಂಧಿಸಿದ್ದರು.ಆರೋಪಿಗಳಿಂದ ಮೂರು ಪಿಸ್ತೂಲ್,ಒಂದು ರಿವಾಲ್ವರ್ ಹಾಗೂ 8 ಜೀವಂತಗುಂಡುಗಳನ್ನ ವಶಪಡಿಸಿಕೊಂಡಿದ್ದರು.ಸಧ್ಯ ಈ ಪ್ರಕರಣದಲ್ಲಿ ಜಾವೆದ್ ಆರೋಪಿಯಾಗೇ ಇದ್ದಾನೆ.ಅಲ್ಲದೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 307 ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ಈತನ ಮೇಲಿದೆ. ಸಧ್ಯ ಜಾವೇದ್ ಖಾನ್ ಎನ್.ಆರ್.ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.

ನಗರಪೊಲೀಸ್ ಆಯುಕ್ತರಾದ ಡಾ.ಬಿ.ರಮೇಶ್ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಸಂದೇಶ್ ಕುಮಾರ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಪೂವಯ್ಯ ನೇತೃತ್ವದಲ್ಲಿ ಪಿಎಸ್ಸೈ ರಾಜು ಕೊನಕೇರಿ ಹಾಗೂ ಇತರ ಸಿಬ್ಬಂದಿಗಳು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *