ಚಿಕ್ಕಮ್ಮನ ಮಗಳ ಕೈಚಳಕ…45 ಗ್ರಾಂ ಚಿನ್ನಾಭರಣ ಕಳುವು…48 ಗಂಟೆಗಳಲ್ಲಿ ಆರೋಪಿ ಪೊಲೀಸರ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ

ಮನೆಯಲ್ಲಿ ಇಟ್ಟಿದ್ದ 45 ಗ್ರಾಂ ಚಿನ್ನದ ಆಭರಣಗಳನ್ನ ಕಳುವು ಮಾಡಿದ ಚಿಕ್ಕಮ್ಮನ ಮಗಳು ಪೊಲೀಸರ ಅತಿಥಿಯಾದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ನಡೆದಿದೆ.ರಾಧಾಶ್ರೀ (26) ಚಿನ್ನದ ಆಭರಣಗಳನ್ನ ಕಳುವು ಮಾಡಿದ ಆರೋಪಿ.ಸಿದ್ದಲಿಂಗಪುರದ ಜಾಹ್ನವಿ ರವರು ತಮ್ಮ ತಾಯಿ ಬಳಿಯಿಂದ ಪಡೆದಿದ್ದ 45 ಗ್ರಾಂ ತೂಕದ ಚಿನ್ನಾಭರಣಗಳನ್ನ ಪರ್ಸ್ ಒಂದರಲ್ಲಿ ಮನೆಯ ಕಿಟಕಿ ಬಳಿ ಇಟ್ಟು ಕೆಲಸಕ್ಕೆ ತೆರಳಿದ್ದರು.ಈ ವೇಳೆ ಮನೆಯಲ್ಲಿದ್ದ ಚಿಕ್ಕಮ್ಮನ ಮಗಳು ರಾಧಾಶ್ರೀ ಚಿನ್ನಾಭರಣ ಇದ್ದ ಪರ್ಸ್ ಕದ್ದು ಪರಾರಿಯಾಗಿದ್ದಾರೆ.ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ಜಾಹ್ನವಿ ರವರಿಗೆ ಚಿನ್ನಾಭರಣ ಇದ್ದ ಪರ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಕೂಡಲೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರಾಧಾಶ್ರೀ ವಿರುದ್ದ ದೂರು ನೀಡಿದ್ದಾರೆ.ತನಿಖೆ ಕೈಗೊಂಡ ಮೇಟಗಳ್ಳಿ ಠಾಣೆ ಪೊಲೀಸರು ರಾಧಾಶ್ರೀ ಯನ್ನ ವಿಚಾರಣೆಗೆ ಒಳಪಡಿಸಿದಾಗಿ ಕಳುವು ಮಾಡಿರುವುದಾಗಿ ಒಪ್ಪಿಕೊಂಡು ಚಿನ್ನಾಭರಣ ಹಿಂದಿರುಗಿಸಿದ್ದಾಳೆ.ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್…
ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ…
ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ…

Leave a Reply

Your email address will not be published. Required fields are marked *