ಚಿಕ್ಕಮ್ಮನ ಮಗಳ ಕೈಚಳಕ…45 ಗ್ರಾಂ ಚಿನ್ನಾಭರಣ ಕಳುವು…48 ಗಂಟೆಗಳಲ್ಲಿ ಆರೋಪಿ ಪೊಲೀಸರ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ

ಮನೆಯಲ್ಲಿ ಇಟ್ಟಿದ್ದ 45 ಗ್ರಾಂ ಚಿನ್ನದ ಆಭರಣಗಳನ್ನ ಕಳುವು ಮಾಡಿದ ಚಿಕ್ಕಮ್ಮನ ಮಗಳು ಪೊಲೀಸರ ಅತಿಥಿಯಾದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ನಡೆದಿದೆ.ರಾಧಾಶ್ರೀ (26) ಚಿನ್ನದ ಆಭರಣಗಳನ್ನ ಕಳುವು ಮಾಡಿದ ಆರೋಪಿ.ಸಿದ್ದಲಿಂಗಪುರದ ಜಾಹ್ನವಿ ರವರು ತಮ್ಮ ತಾಯಿ ಬಳಿಯಿಂದ ಪಡೆದಿದ್ದ 45 ಗ್ರಾಂ ತೂಕದ ಚಿನ್ನಾಭರಣಗಳನ್ನ ಪರ್ಸ್ ಒಂದರಲ್ಲಿ ಮನೆಯ ಕಿಟಕಿ ಬಳಿ ಇಟ್ಟು ಕೆಲಸಕ್ಕೆ ತೆರಳಿದ್ದರು.ಈ ವೇಳೆ ಮನೆಯಲ್ಲಿದ್ದ ಚಿಕ್ಕಮ್ಮನ ಮಗಳು ರಾಧಾಶ್ರೀ ಚಿನ್ನಾಭರಣ ಇದ್ದ ಪರ್ಸ್ ಕದ್ದು ಪರಾರಿಯಾಗಿದ್ದಾರೆ.ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ಜಾಹ್ನವಿ ರವರಿಗೆ ಚಿನ್ನಾಭರಣ ಇದ್ದ ಪರ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಕೂಡಲೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರಾಧಾಶ್ರೀ ವಿರುದ್ದ ದೂರು ನೀಡಿದ್ದಾರೆ.ತನಿಖೆ ಕೈಗೊಂಡ ಮೇಟಗಳ್ಳಿ ಠಾಣೆ ಪೊಲೀಸರು ರಾಧಾಶ್ರೀ ಯನ್ನ ವಿಚಾರಣೆಗೆ ಒಳಪಡಿಸಿದಾಗಿ ಕಳುವು ಮಾಡಿರುವುದಾಗಿ ಒಪ್ಪಿಕೊಂಡು ಚಿನ್ನಾಭರಣ ಹಿಂದಿರುಗಿಸಿದ್ದಾಳೆ.ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *