ಚಿಕ್ಕಮ್ಮನ ಮಗಳ ಕೈಚಳಕ…45 ಗ್ರಾಂ ಚಿನ್ನಾಭರಣ ಕಳುವು…48 ಗಂಟೆಗಳಲ್ಲಿ ಆರೋಪಿ ಪೊಲೀಸರ ವಶಕ್ಕೆ…

ಮೈಸೂರು,ಫೆ25,Tv10 ಕನ್ನಡ

ಮನೆಯಲ್ಲಿ ಇಟ್ಟಿದ್ದ 45 ಗ್ರಾಂ ಚಿನ್ನದ ಆಭರಣಗಳನ್ನ ಕಳುವು ಮಾಡಿದ ಚಿಕ್ಕಮ್ಮನ ಮಗಳು ಪೊಲೀಸರ ಅತಿಥಿಯಾದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ನಡೆದಿದೆ.ರಾಧಾಶ್ರೀ (26) ಚಿನ್ನದ ಆಭರಣಗಳನ್ನ ಕಳುವು ಮಾಡಿದ ಆರೋಪಿ.ಸಿದ್ದಲಿಂಗಪುರದ ಜಾಹ್ನವಿ ರವರು ತಮ್ಮ ತಾಯಿ ಬಳಿಯಿಂದ ಪಡೆದಿದ್ದ 45 ಗ್ರಾಂ ತೂಕದ ಚಿನ್ನಾಭರಣಗಳನ್ನ ಪರ್ಸ್ ಒಂದರಲ್ಲಿ ಮನೆಯ ಕಿಟಕಿ ಬಳಿ ಇಟ್ಟು ಕೆಲಸಕ್ಕೆ ತೆರಳಿದ್ದರು.ಈ ವೇಳೆ ಮನೆಯಲ್ಲಿದ್ದ ಚಿಕ್ಕಮ್ಮನ ಮಗಳು ರಾಧಾಶ್ರೀ ಚಿನ್ನಾಭರಣ ಇದ್ದ ಪರ್ಸ್ ಕದ್ದು ಪರಾರಿಯಾಗಿದ್ದಾರೆ.ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ ಜಾಹ್ನವಿ ರವರಿಗೆ ಚಿನ್ನಾಭರಣ ಇದ್ದ ಪರ್ಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.ಕೂಡಲೇ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ರಾಧಾಶ್ರೀ ವಿರುದ್ದ ದೂರು ನೀಡಿದ್ದಾರೆ.ತನಿಖೆ ಕೈಗೊಂಡ ಮೇಟಗಳ್ಳಿ ಠಾಣೆ ಪೊಲೀಸರು ರಾಧಾಶ್ರೀ ಯನ್ನ ವಿಚಾರಣೆಗೆ ಒಳಪಡಿಸಿದಾಗಿ ಕಳುವು ಮಾಡಿರುವುದಾಗಿ ಒಪ್ಪಿಕೊಂಡು ಚಿನ್ನಾಭರಣ ಹಿಂದಿರುಗಿಸಿದ್ದಾಳೆ.ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *