ಸಾಲಗಾರರ ಕಿರುಕುಳ…ಡೆತ್ ನೋಟ್ ಬರೆದು ಲೇಡೀಸ್ ಪಿಜಿ ಓನರ್ ಆತ್ಮಹತ್ಯೆ…12 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ1,Tv10 ಕನ್ನಡ

ಸಾಲಗಾರರ ಕಾಟಕ್ಕೆ ಬೇಸತ್ತ ಲೇಡೀಸ್ ಪಿಜಿ ಓನರ್ ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.ಜಯಶ್ರೀ ಆತ್ಮಹತ್ಯೆಗೆ ಶರಣಾದ ಲೇಡೀಸ್ ಪಿಜಿ ಓನರ್.ವಿಜಯನಗರ ನಿವಾಸಿಗಳಾದ ಸಾವಿತ್ರಿ,ಸುಕನ್ಯ,ಪ್ರೇಮಾ,ದೇವಮ್ಮ,ಸಾಕಮ್ಮ,ಪುಷ್ಪಲತಾ,ಪುಷ್ಪ,ಸುಮ,ಶೋಭಾ,ವಿಜಯ,ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವರು ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಹಿನ್ನಲೆ FIR ದಾಖಲಾಗಿದೆ.

ಕಳೆದ 10 ವರ್ಷಗಳಿಂದ ಜಯಶ್ರೀ ರವರು ರೈಲ್ವೆ ಬಡಾವಣೆಯಲ್ಲಿ ಗಂಗಾಧರೇಶ್ವರ ಲೇಡೀಸ್ ಪಿಜಿ ನಡೆಸುತ್ತಿದ್ದರು.ತಮ್ಮ ವ್ಯವಹಾರಕ್ಕಾಗಿ ಸಾಕಷ್ಟು ಮಂದಿಯಿಂದ ಸಾಲ ಪಡೆದಿದ್ದರು.ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲರಾಗಿದ್ದರು.ಹೀಗಾಗಿ ಆಗಾಗ ಸಾಲಗಾರರು ಪಿಜಿ ಬಳಿ ಬಂದು ಗಲಾಟೆ ಮಾಡುತ್ತಿದ್ದರು.ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.ಡೆತ್ ನೋಟ್ ನಲ್ಲಿ ಮಗ ಭರತ್ ಗೆ ತಮ್ಮ ನೋವನ್ನ ತಿಳಿಸಿದ್ದಾರೆ. *ನಾನು ನನ್ನ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ,ಸಾಲದ ತಾಯಿ ಆದೆ,ಸಾಲಗಾರರಿಗೆ ಬಡ್ಡಿ ತಿನ್ನಿಸಿದ್ದೇನೆ,ಸಾಲಗಾರರು ಪಿಜಿ ಮುಂದೆ ಬಂದು ಮರ್ಯಾದೆ ತೆಗೆದಿದ್ದಾರೆ.ಸಾಲ ತೀರಿಸದಿದ್ದಲ್ಲಿ ಸಾಯುವುದೇ ಲೇಸು ಎಂದು ಕಿರುಚಾಡಿದ್ದಾರೆಂದು ಆರೋಪಿಸಿ 12 ಮಂದಿಯನ್ನ ಉಲ್ಲೇಖಿಸಿದ್ದಾರೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *