ಸಾಲಗಾರರ ಕಿರುಕುಳ…ಡೆತ್ ನೋಟ್ ಬರೆದು ಲೇಡೀಸ್ ಪಿಜಿ ಓನರ್ ಆತ್ಮಹತ್ಯೆ…12 ಮಂದಿ ವಿರುದ್ದ FIR ದಾಖಲು…

ಮೈಸೂರು,ಮಾ1,Tv10 ಕನ್ನಡ

ಸಾಲಗಾರರ ಕಾಟಕ್ಕೆ ಬೇಸತ್ತ ಲೇಡೀಸ್ ಪಿಜಿ ಓನರ್ ಡೆತ್ ನೋಟ್ ಬರೆದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಬಡಾವಣೆಯಲ್ಲಿ ನಡೆದಿದೆ.ಜಯಶ್ರೀ ಆತ್ಮಹತ್ಯೆಗೆ ಶರಣಾದ ಲೇಡೀಸ್ ಪಿಜಿ ಓನರ್.ವಿಜಯನಗರ ನಿವಾಸಿಗಳಾದ ಸಾವಿತ್ರಿ,ಸುಕನ್ಯ,ಪ್ರೇಮಾ,ದೇವಮ್ಮ,ಸಾಕಮ್ಮ,ಪುಷ್ಪಲತಾ,ಪುಷ್ಪ,ಸುಮ,ಶೋಭಾ,ವಿಜಯ,ಫೈನಾನ್ಸ್ ಮಾಲೀಕ ಪ್ರದೀಪ್ ಹಾಗೂ ಕುಮಾರ್ ಎಂಬುವರು ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿರುವ ಹಿನ್ನಲೆ FIR ದಾಖಲಾಗಿದೆ.

ಕಳೆದ 10 ವರ್ಷಗಳಿಂದ ಜಯಶ್ರೀ ರವರು ರೈಲ್ವೆ ಬಡಾವಣೆಯಲ್ಲಿ ಗಂಗಾಧರೇಶ್ವರ ಲೇಡೀಸ್ ಪಿಜಿ ನಡೆಸುತ್ತಿದ್ದರು.ತಮ್ಮ ವ್ಯವಹಾರಕ್ಕಾಗಿ ಸಾಕಷ್ಟು ಮಂದಿಯಿಂದ ಸಾಲ ಪಡೆದಿದ್ದರು.ಸಮಯಕ್ಕೆ ಸರಿಯಾಗಿ ಸಾಲ ಹಿಂದಿರುಗಿಸಲು ಜಯಶ್ರೀ ವಿಫಲರಾಗಿದ್ದರು.ಹೀಗಾಗಿ ಆಗಾಗ ಸಾಲಗಾರರು ಪಿಜಿ ಬಳಿ ಬಂದು ಗಲಾಟೆ ಮಾಡುತ್ತಿದ್ದರು.ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಜಯಶ್ರೀ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.ಡೆತ್ ನೋಟ್ ನಲ್ಲಿ ಮಗ ಭರತ್ ಗೆ ತಮ್ಮ ನೋವನ್ನ ತಿಳಿಸಿದ್ದಾರೆ. *ನಾನು ನನ್ನ ಮಕ್ಕಳಿಗೆ ಒಳ್ಳೆ ತಾಯಿ ಆಗಲಿಲ್ಲ,ಸಾಲದ ತಾಯಿ ಆದೆ,ಸಾಲಗಾರರಿಗೆ ಬಡ್ಡಿ ತಿನ್ನಿಸಿದ್ದೇನೆ,ಸಾಲಗಾರರು ಪಿಜಿ ಮುಂದೆ ಬಂದು ಮರ್ಯಾದೆ ತೆಗೆದಿದ್ದಾರೆ.ಸಾಲ ತೀರಿಸದಿದ್ದಲ್ಲಿ ಸಾಯುವುದೇ ಲೇಸು ಎಂದು ಕಿರುಚಾಡಿದ್ದಾರೆಂದು ಆರೋಪಿಸಿ 12 ಮಂದಿಯನ್ನ ಉಲ್ಲೇಖಿಸಿದ್ದಾರೆ.ವಿಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *