ಕಾಮಗಾರಿ ಬಿಲ್ ಗಾಗಿ ಕೆರೆಯ ಹೆಸರನ್ನೇ ಬದಲಿಸಿದ ಪ್ರಕರಣ …ಮೂವರು ಅಧಿಕಾರಿಗಳಿಂದ ಬಿಲ್ ಹಣ ವಸೂಲಿ ಮಾಡುವಂತೆ ಓಂಬಡ್ಸ್ ಮನ್ ಆದೇಶ…

ಹುಣಸೂರು,ಮಾ5,Tv10 ಕನ್ನಡ

ಕಾಮಗಾರಿ ಬಿಲ್ ಪಾವತಿಗಾಗಿ ಕೆರೆಯ ಹೆಸರನ್ನೇ ಬದಲಿಸಿದ ಪ್ರಕರಣಕ್ಕೆ ಓಂಬಡ್ಸ್ ಮನ್ ಅಧಿಕಾರಿಗಳು ಚಾಟಿ ಬೀಸಿದ್ದಾರೆ.ಬಿಲ್ ಪಾವತಿಸಿದ ಅಧಿಕಾರಿಗಳಿಂದ ವಸೂಲಿ ಮಾಡುವಂತೆ ಓಂಬುಡ್ಸ್ ಮೆನ್ ನ ಮಹಾತ್ಮಗಾಂಧಿ ನರೇಗಾ ಯೋಜನೆ ಅಧಿಕಾರಿ ಡಾ.ರಮೇಶ್ ರವರು ಆದೇಶಿಸಿದ್ದಾರೆ. ಮೂವರು ಅಧಿಕಾರಿಗಳು 1.12,497/- ರೂಗಳನ್ನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲ ಖಾತೆಗೆ ಜಮಾ ಮಾಡಬೇಕಿದೆ.ಹುಲ್ಲುಕೆರೆ ಗ್ರಾಮ ಪಂಚಾಯ್ತಿ ಹಾಲಿ ಅಧ್ಯಕ್ಷ ಸತೀಶ್,ಪಾಂಚಾಯ್ತಿ ಅಭಿವೃದ್ದಿ ಅಧಿಕಾರಿ ರವಿ ಹಾಗೂ ತಾಂತ್ರಿಕ ಸಹಾಯಕ ಅಭಿಯಂತರ ನಂದ ಶ್ರೀನಿವಾಸ್ ರವರು ತಲಾ 37,499/ – ರೂ ಪಾವತಿಸಬೇಕಿದೆ.

ಹುಣಸೂರು ತಾಲೂಕು ಚಿಲ್ಕುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.ಚಿಲ್ಕುಂದ ಗ್ರಾಮದ ತೊಂಡೆಕೆರೆ ಅಭಿವೃದ್ದಿಗಾಗಿ ಗುತ್ತಿಗೆದಾರನಿಗೆ ಕಾಮಗಾರಿ ಜವಾಬ್ದಾರಿ ನೀಡಲಾಗಿತ್ತು.ಆದರೆ ತೊಂಡೆಕೆರೆ ಬದಲು ಹುಲ್ಲುಕೆರೆಯಲ್ಲಿ ಕಾಮಗಾರಿ ನಡೆಸಿದ್ದಾರೆ.ಈ ವಿಚಾರ ಗ್ರಾಮದ ಮುಖಂಡ ಪ್ರೇಂಕುಮಾರ್ ಎಂಬುವರು ಬೆಳಕಿಗೆ ತಂದಿದ್ದರು.ತಮ್ಮ ತಪ್ಪನ್ನ ಮುಚ್ಚಿಕೊಳ್ಳಲು ಹುಲಿಕೆರೆಗೆ ತೊಂಡೆಕೆರೆ ಎಂಬ ನಾಮಫಲಕ ಅಳವಡಿಸಿದ್ದ ಅಧಿಕಾರಿಗಳು ಮತ್ತೊಂದು ಎಡವಟ್ಟು ಮಾಡಿದ್ದರು.ಸರ್ಕಾರಿ ದಾಖಲೆಗಳ ಪ್ರಕಾರ ಸಧ್ಯ ಅಳವಡಿಸಿರುವ ತೊಂಡೆಕೆರೆ ಪ್ರದೇಶ ಹುಲ್ಲುಕೆರೆ ಎಂದು ತೋರಿಸುತ್ತಿದೆ.ಸ್ಥಳೀಯರೂ ಸಹ ಹುಲ್ಲುಕೆರೆ ಎಂದೇ ಹೇಳುತ್ತಿದ್ದಾರೆ.ಕೇವಲ ಬಿಲ್ ಪಾವತಿಗಾಗಿ ಕೆರೆಯ ಹೆಸರನ್ನ ಬದಲಿಸಿರುವ ಭೂಪರಿಗೆ ಶಿಕ್ಷೆ ಆಗಬೇಕೆಂದು ಪ್ರೇಂಕುಮಾರ್ ರವರು ಮೈಸೂರಿನ ಜಿಲ್ಲಾ ಲಂಚಾಯತ್ ಕಚೇರಿಯಲ್ಲಿರುವ ಓಂಬುಡ್ಸ್ ಮನ್ ಗೆ ದೂರು ನೀಡಿದ್ದರು.ಈಗಾಗಲೇ ಈ ಅಕ್ರಮದ ಬಗ್ಗೆ ತನಿಖೆ ನಡೆಸುವುದಾಗಿ ತಾಲೂಕು ಇಓ ಮನು ರವರು ತಿಳಿಸಿದ್ದರು.ಸಧ್ಯ ಈ ಹಗರಣದ ಬಗ್ಗೆ ಫೆ21 ರಂದು ಓಂಬಡ್ಸ್ ಮನ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು.ಕೇವಲ 1.12 ಲಕ್ಷ ಬಿಲ್ ಗಾಗಿ ಕೆರೆಯ ಹೆಸರನ್ನೇ ಬದಲಿಸಿದ ಭೂಪರ ಬಣ್ಣ ಬಯಲು ಮಾಡಲಾಗಿದೆ.ಮೂವರು ಅಧಿಕಾರಿಗಳಿಂದ ಹಣ ವಸೂಲಿ ಮಾಡುವಂತೆ ಆದೇಶಿಸಲಾಗಿದೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *