ಲೋಕಾ ಬಲೆಗೆ ಸೆಸ್ಕ್ ಎಇ ಹಾಗೂ ಲೈನ್ ಮನ್ …ವಿದ್ಯುತ್ ಸಂಪರ್ಕ ನೀಡಲು ಲಂಚ ಪಡೆಯುತ್ತಿದ್ದ ಖದೀಮರು ಲಾಕ್…

ಮೈಸೂರು,ಮಾ7,Tv10 ಕನ್ನಡ

ವಿದ್ಯುತ್ ಸಂಪರ್ಕ ನೀಡಲು ಲಂಚದ ಬೇಡಿಕೆ ಇಟ್ಟ ಸೆಸ್ಕ್‌ನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೆಸ್ಕ್‌ನ ಎ ಇ ಜಿ.ಹರೀಶ್, ಜೂನಿಯರ್ ಲೈನ್‌ಮನ್ ಗುಂಡಪ್ಪ(29) ಬಲೆಗೆ ಬಿದ್ದವರು.
ಕುವೆಂಪು ನಗರದಲ್ಲಿರುವ ಸೆಸ್ಕ್‌ನ ಉಪ ವಿಭಾಗದ ಕಚೇರಿಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದಾರೆ.
ಬೆಂಗಳೂರು ಮೂಲದ ಅಭಿಷೇಕ್ ಅವರು ಮೈಸೂರು ನಗರದಲ್ಲಿ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದುರು.ಇದಕ್ಕಾಗಿ ಎಇ ಹರೀಶ್ ಅವರು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಅಭಿಷೇಕ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಗುರುವಾರ ಸಂಜೆ ಕಚೇರಿಯಲ್ಲಿ ಎಇ ಹರೀಶ್ ಪರವಾಗಿ ಮಾತನಾಡಿದ ಲೈನ್‌ಮನ್ ಗುಂಡಪ್ಪ ಲಂಚ ಸ್ವೀಕರಿಸುತ್ತಿದ್ದಾಗ ಕಾರ್ಯಚರಣೆ ನಡೆಸಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಹಿಡಿದು ಲಂಚದ ಹಣವನ್ನು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ವಿ.ಜೆ.ಸಜೀತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ವಿ.ಕೃಷ್ಣಯ್ಯ, ಇನ್ಸ್‌ಪೆಕ್ಟರ್‌ಗಳಾದ ಉಮೇಶ್, ಜಯರತ್ನ, ಸಿಬ್ಬಂದಿಗಳಾದ ಗುರುಪ್ರಸಾದ್, ವೀರಭದ್ರ ಸ್ವಾಮಿ, ಕಾಂತರಾಜು,ಆಶಾ, ತ್ರಿವೇಣಿ, ಮೋಹನ, ಪ್ರದೀಪ ಭಾಗವಹಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *